ಸಾರಾಂಶ
ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಬಳಿಯ ಡಿ. ಕುರುಬರಹಳ್ಳಿ ನಿವಾಸಿಯಾಗಿದ್ದು ಅಫಘಾತಕ್ಕೆ ಕಾರಣನಾದ ಬಸ್ ಚಾಲಕ ಘಟನೆ ನಡೆದ ಸ್ಥಳದಿಂದ ಪರಾರಿಯಾಗಿದ್ದಾನೆ.
ದೇವನಹಳ್ಳಿ: ಬೆಂಗಳೂರಿನಿಂದ ಚಿಕ್ಕಬಳ್ಳಾಪುರ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮುಂದೆ ಹೋಗುತ್ತಿದ್ದ ರಾಯಲ್ ಎನ್ಫೀಲ್ಡ್ ಬೈಕ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿರುವ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ಕನ್ನಮಂಗಲ ಗೇಟ್ ಬಳಿ ಸೋಮವಾರ ಮದ್ಯಾಹ್ನ 1:45 ರ ಸಮಯದಲ್ಲಿ ನಡೆದಿದೆ.
ಮೃತ ಬೈಕ್ ಸವಾರ ಸಂತೋಷ್ ಕುಮಾರ್ (24) ಇಂಜಿನಿಯರ್ಆಗಿದ್ದು, ಚಿಕ್ಕಬಳ್ಳಾಪುರ ತಾಲೂಕಿನ ದಿಬ್ಬೂರು ಬಳಿಯ ಡಿ. ಕುರುಬರಹಳ್ಳಿ ನಿವಾಸಿಯಾಗಿದ್ದು ಅಫಘಾತಕ್ಕೆ ಕಾರಣನಾದ ಬಸ್ ಚಾಲಕ ಘಟನೆ ನಡೆದ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತನ ಶವವನ್ನು ಮರೋತ್ತರ ಪರೀಕ್ಷೆಗಾಗಿ ಆಕಾಶ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಬಸ್ ಮತ್ತು ಬೈಕ್ನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಸಂಚಾರ ವಿಭಾಗದ ಪಿಎಸ್ಐ ಸಾವಿತ್ರಿ ತಿಳಿಸಿದ್ದಾರೆ.೦೧ ದೇವನಹಳ್ಳಿ ಚಿತ್ರ ಸುದ್ದಿ ೦೯ ಕನ್ನಮಂಗಲ ಪಾಳ್ಯ ಗೇಟ್ ನಲ್ಲಿ ಖಾಸಗಿ ಬಸ್ ಬೈಕ್ಗೆ ಡಿಕ್ಕಿಯಾಗಿರುವುದು.೦೨ ದೇವನಹಳ್ಳಿ ಚಿತ್ರ ಸುದ್ದಿ ೦೯ ಕನ್ನಮಂಗಲ ಪಾಳ್ಯ ಗೇಟ್ ನಲ್ಲಿ ಖಾಸಗಿ ಬಸ್ ಬೈಕ್ಗೆ ಡಿಕ್ಕಿಯಾಗಿ ಸವಾರ ಮೃತಪಟ್ಟಿರುವುದು.