ವಿಜಯಪುರ ವಕ್ಫ್‌ ಸಮಸ್ಯೆ ಅಧ್ಯಯನಕ್ಕೆ ಬಿಜೆಪಿ ಸಮಿತಿ : ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ

| Published : Oct 28 2024, 01:06 AM IST / Updated: Oct 28 2024, 07:17 AM IST

Govinda Karajola
ವಿಜಯಪುರ ವಕ್ಫ್‌ ಸಮಸ್ಯೆ ಅಧ್ಯಯನಕ್ಕೆ ಬಿಜೆಪಿ ಸಮಿತಿ : ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ
Share this Article
  • FB
  • TW
  • Linkdin
  • Email

ಸಾರಾಂಶ

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಮಂಡಳಿಯಿಂದ ಆಗುತ್ತಿರುವ ತೊಂದರೆ ಕುರಿತು ರೈತರ ಸಮಸ್ಯೆ ಅಧ್ಯಯನ ಮಾಡುವ ಸಂಬಂಧ ಪ್ರತಿಪಕ್ಷ ಬಿಜೆಪಿಯು ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದೆ.

  ಬೆಂಗಳೂರು : ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಮಂಡಳಿಯಿಂದ ಆಗುತ್ತಿರುವ ತೊಂದರೆ ಕುರಿತು ರೈತರ ಸಮಸ್ಯೆ ಅಧ್ಯಯನ ಮಾಡುವ ಸಂಬಂಧ ಪ್ರತಿಪಕ್ಷ ಬಿಜೆಪಿಯು ಸಂಸದ ಹಾಗೂ ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿದೆ.ಈ ತಂಡವು ಮಂಗಳವಾರ ವಿಜಯಪುರ ಜಿಲ್ಲೆಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ನಡೆಸಲಿದೆ.

ತಂಡದಲ್ಲಿ ಕಾರಜೋಳ ಜತೆಗೆ ಶಾಸಕರಾದ ಹರೀಶ್ ಪೂಂಜಾ, ಮಹೇಶ್ ಟೆಂಗಿನಕಾಯಿ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಅರುಣ್ ಶಹಾಪುರ ಹಾಗೂ ರೈತ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಅವರು ಇದ್ದಾರೆ.‘ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್ ಕಾಯ್ದೆಯಿಂದ ಆಗುತ್ತಿರುವ ತೊಂದರೆ ಹಾಗೂ ತೊಂದರೆಗೊಳಗಾದ ರೈತರ ಅಹವಾಲನ್ನು ಕೇಳಲು ರಾಜ್ಯ ಬಿಜೆಪಿ ವತಿಯಿಂದ ತಂಡವನ್ನು ರಚಿಸಲಾಗಿದ್ದು, ಈ ತಂಡವು 29ರಂದು ಭೇಟಿ ನೀಡಲಿದೆ. 

ತಂಡದ ಸದಸ್ಯರು ರೈತರ ಸಮಸ್ಯೆಯ ಸಮಗ್ರ ವರದಿಯನ್ನು ನೀಡಲು ನಿರ್ದೇಶಿಸಲಾಗಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.