ಕೇವಲ ಆರೋಪ ಬಂದ ಮಾತ್ರಕ್ಕೆ ಯಾರನ್ನೂ ಅಪರಾಧಿ ಎಂದು ಘೋಷಿಸಲು ಸಾಧ್ಯವಿಲ್ಲ. ಆರೋಪ ಸಾಬೀತಾದ ಬಳಿಕ ನ್ಯಾಯಾಂಗ ಹಾಗೂ ಸಂವಿಧಾನದ ಚೌಕಟ್ಟಿನಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಬಿಜೆಪಿ ತನ್ನ ರಾಜಕೀಯ ಪ್ರತಿಷ್ಠೆಗಾಗಿ ವಿಧಾನಮಂಡಲದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಬರದ ಕುರಿತು ಚರ್ಚೆ ನಡೆಸುವುದನ್ನು ಬಿಟ್ಟು ನಾಗೇಂದ್ರ ಪ್ರಕರಣವನ್ನು ಮುಂದಿಟ್ಟುಕೊಂಡು ಸದನದ ಕಲಾಪಕ್ಕೆ ಅಡ್ಡಿಪಡಿಸಿರುವುದು ಸರಿಯಲ್ಲ ಎಂದು ಟೀಕಿಸಿದರು.
ಕನ್ನಡಪ್ರಭ ವಾರ್ತೆ ಹಾಸನ
ಮಾಜಿ ಸಚಿವ ನಾಗೇಂದ್ರ ಅವರ ವಿಚಾರವನ್ನು ಮುಂದಿಟ್ಟುಕೊಂಡು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಜನಪರ ಹೋರಾಟವಲ್ಲ. ಬರದ ಬಗ್ಗೆ ಚಿಂತಿಸುವುದನ್ನು ಬಿಟ್ಟು ರಾಜಕೀಯ ಲಾಭಕ್ಕಾಗಿ ನಡೆಸುತ್ತಿರುವ ದೊಂಬರಾಟ ಎಂದು ಅಬಕಾರಿ ಸಚಿವ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಆರೋಪಿಸಿದರು.ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಆರೋಪ ಬಂದ ಮಾತ್ರಕ್ಕೆ ಯಾರನ್ನೂ ಅಪರಾಧಿ ಎಂದು ಘೋಷಿಸಲು ಸಾಧ್ಯವಿಲ್ಲ. ಆರೋಪ ಸಾಬೀತಾದ ಬಳಿಕ ನ್ಯಾಯಾಂಗ ಹಾಗೂ ಸಂವಿಧಾನದ ಚೌಕಟ್ಟಿನಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಬಿಜೆಪಿ ತನ್ನ ರಾಜಕೀಯ ಪ್ರತಿಷ್ಠೆಗಾಗಿ ವಿಧಾನಮಂಡಲದ ಅಮೂಲ್ಯ ಸಮಯವನ್ನು ವ್ಯರ್ಥ ಮಾಡಿದೆ. ರಾಜ್ಯದ ಹಲವು ಭಾಗಗಳಲ್ಲಿ ಬರ ಪರಿಸ್ಥಿತಿ ತೀವ್ರವಾಗಿದ್ದು, ರೈತರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಬರದ ಕುರಿತು ಚರ್ಚೆ ನಡೆಸುವುದನ್ನು ಬಿಟ್ಟು ನಾಗೇಂದ್ರ ಪ್ರಕರಣವನ್ನು ಮುಂದಿಟ್ಟುಕೊಂಡು ಸದನದ ಕಲಾಪಕ್ಕೆ ಅಡ್ಡಿಪಡಿಸಿರುವುದು ಸರಿಯಲ್ಲ ಎಂದು ಟೀಕಿಸಿದರು.ತೆನೆ ತೋರಿಸಿದರೆ ಬರ ಪರಿಹಾರವಾಗುವುದಿಲ್ಲನಾವು ಜಿಲ್ಲೆಗಳಿಗೆ ತೆರಳಿ ಬರ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇವೆ. ರೈತರ ಬೆಳೆ ಹಾನಿ, ನೀರಿನ ಲಭ್ಯತೆ ಹಾಗೂ ಕೃಷಿ ಪರಿಸ್ಥಿತಿಯ ಕುರಿತು ಮಾಹಿತಿ ಸಂಗ್ರಹಿಸಿ ಸದನದಲ್ಲಿ ಚರ್ಚಿಸುವ ಮೂಲಕ ಪರಿಹಾರ ಒದಗಿಸುವ ಮಾರ್ಗೋಪಾಯಗಳನ್ನು ರೂಪಿಸಬೇಕಾಗಿದೆ. ಆದರೆ ಬಿಜೆಪಿ ಯಾವುದೇ ಚರ್ಚೆಗೆ ಅವಕಾಶ ನೀಡದೆ ರಾಜಕೀಯ ವಿಷಯವನ್ನೇ ಮುನ್ನೆಲೆಗೆ ತಂದಿದೆ ಎಂದು ದೂರಿದರು. ಹೊಲಗಳಿಗೆ ತೆರಳಿ ಬೆಳೆ ಅಥವಾ ತೆನೆ ಹಿಡಿದು ತೋರಿಸುವುದರಿಂದ ರೈತರ ಸಮಸ್ಯೆ ಪರಿಹಾರವಾಗುವುದಿಲ್ಲ. ಬೆಳೆ ಹಾನಿಗೊಳಗಾದ ರೈತರಿಗೆ ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಜನರ ಸಂಕಷ್ಟವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದನ್ನು ರಾಜ್ಯದ ಜನರು ಒಪ್ಪುವುದಿಲ್ಲ ಎಂದು ಹೇಳಿದರು. ಬರ ಪರಿಸ್ಥಿತಿ ಕುರಿತು ಸದನದಲ್ಲಿ ಇನ್ನೂ ಮೂರು ದಿನಗಳ ಕಾಲ ಸಮಗ್ರ ಚರ್ಚೆ ನಡೆಸಿ, ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಶಿವಲಿಂಗೇಗೌಡ ಒತ್ತಾಯಿಸಿದರು. ಅಲ್ಲೋಲ-ಕಲ್ಲೋಲದ ಪರಿಣಾಮ ಕೇಂದ್ರಕ್ಕೂ ಆಗಬೇಕಲ್ಲವೆ?ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು, ತಾವು ಬಿಡುಗಡೆ ಮಾಡುವ ಸುದ್ದಿಯಿಂದ ದೇಶದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಲಿದೆ ಎಂದು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಲಿಂಗೇಗೌಡ ವ್ಯಂಗ್ಯವಾಡಿದರು. ದೇಶಾದ್ಯಂತ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗುವುದಾದರೆ ಅದರ ಪರಿಣಾಮ ಅವರ ನೇತೃತ್ವದ ಕೇಂದ್ರ ಸರ್ಕಾರದ ಮೇಲೂ ಆಗಬೇಕಲ್ಲವೇ? ಅವರು ಭಾರತ ದೇಶದಲ್ಲೇ ಇದ್ದಾರೆಯೇ? ಎಂದು ಪ್ರಶ್ನಿಸಿದರು. ಕುಮಾರಸ್ವಾಮಿ ಅವರು ಇತ್ತೀಚಿನ ದಿನಗಳಲ್ಲಿ ನೀಡುತ್ತಿರುವ ಕೆಲವು ಹೇಳಿಕೆಗಳು ನಿರಾಶಾದಾಯಕವಾಗಿವೆ. ವೈಯಕ್ತಿಕವಾಗಿ ಯಾರನ್ನೂ ಟೀಕಿಸುವ ಉದ್ದೇಶ ನನಗಿಲ್ಲ. ಆದರೆ ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ನಿರಾಶಾದಾಯಕ ಹೇಳಿಕೆಗಳನ್ನು ನೀಡುವುದು ಸೂಕ್ತವಲ್ಲ ಎಂದು ಸಚಿವರು ಹೇಳಿದರು.ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಜನರ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. ರೈತರು ಬರದಿಂದ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜಕೀಯ ಸಂಘರ್ಷಕ್ಕಿಂತ ಪರಿಹಾರ ಕ್ರಮಗಳತ್ತ ಗಮನ ಹರಿಸುವುದು ಎಲ್ಲ ಪಕ್ಷಗಳ ಜವಾಬ್ದಾರಿಯಾಗಿದೆ ಎಂದು ಹೇಳಿದರು.