ಸಾರಾಂಶ
, ಯುವಕರು ರಕ್ತದಾನ ಮಾಡುವ ಮೂಲಕ ಅನೇಕ ಜೀವಗಳನ್ನು ಉಳಿಸುವ ಮಹಾನ್ ಕಾಯಕದಲ್ಲಿ ಭಾಗಿಯಾಗಬೇಕು. ಸಮಾಜ ಸುಧಾರಣೆಗೆ ಆರೋಗ್ಯವೇ ಆಧಾರ. ಜೀವನದಲ್ಲಿ ಎಷ್ಟೇ ಜಂಜಾಟಗಳಿದ್ದರೂ ಆರೋಗ್ಯದ ಬಗ್ಗೆ ಕಾಳಜಿ ಅವಶ್ಯಕ.
ಅರಸೀಕೆರೆ: ಬಾಣಾವರ ಯೂತ್ ಕವರೇಜ್ ಗ್ರೂಪ್ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ಟಿಪ್ಪು ಸುಲ್ತಾನ್ ಜಯಂತಿಯ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಶಿಬಿರ, ದಂತ ತಪಾಸಣೆ, ರಕ್ತ ಗುಂಪು ಪರೀಕ್ಷೆ ಹಾಗೂ ರಕ್ತದಾನ ಶಿಬಿರವನ್ನು ಬಾಣಾವರದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸುನ್ನಿ ಮುಸ್ಲಿಂ ಜಮಾತ್ ಸಮಿತಿಯ ಅಧ್ಯಕ್ಷ ಸೈಯದ್ ರಹೀಂ ಸಾಬ್, ಕರ್ನಾಟಕವು ವಿಭಿನ್ನತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸುವ ರಾಜ್ಯ. ಇಲ್ಲಿ ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಸಹಬಾಳ್ವೆಯೊಂದಿಗೆ ಬದುಕುತ್ತಿದ್ದಾರೆ. ಪ್ರತಿಯೊಬ್ಬರೂ ರಾಜ್ಯದ ಏಕತೆ ಮತ್ತು ಐಕ್ಯತೆಯನ್ನು ಕಾಪಾಡಲು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.ಬಿ.ವೈ.ಸಿ. ಗ್ರೂಪ್ನ ಮಹಮ್ಮದ್ ಅಯೂಬ್ ಮಾತನಾಡಿ, ಯುವಕರು ರಕ್ತದಾನ ಮಾಡುವ ಮೂಲಕ ಅನೇಕ ಜೀವಗಳನ್ನು ಉಳಿಸುವ ಮಹಾನ್ ಕಾಯಕದಲ್ಲಿ ಭಾಗಿಯಾಗಬೇಕು. ಸಮಾಜ ಸುಧಾರಣೆಗೆ ಆರೋಗ್ಯವೇ ಆಧಾರ. ಜೀವನದಲ್ಲಿ ಎಷ್ಟೇ ಜಂಜಾಟಗಳಿದ್ದರೂ ಆರೋಗ್ಯದ ಬಗ್ಗೆ ಕಾಳಜಿ ಅವಶ್ಯಕ ಎಂದು ತಿಳಿಸಿದರು. ಆರೋಗ್ಯಕರ ಆಹಾರ ಪದ್ಧತಿ, ವ್ಯಾಯಾಮ, ಕ್ರೀಡೆಗಳಲ್ಲಿ ಪಾಲ್ಗೊಳ್ಳುವಿಕೆ ಹಾಗೂ ಆರೋಗ್ಯ ತಪಾಸಣಾ ಶಿಬಿರಗಳ ಮಹತ್ವವನ್ನು ವಿವರಿಸಿ, ಯುವಕರು ಇಂತಹ ಶಿಬಿರಗಳನ್ನು ಹೆಚ್ಚಾಗಿ ಆಯೋಜಿಸಿದರೆ ವೃದ್ಧರು ಹಾಗೂ ಸಾರ್ವಜನಿಕರಿಗೆ ಅಪಾರ ಲಾಭ ಎಂದರು.
ಮುಸ್ಲಿಂ ಸಮಾಜದ ಮಾಜಿ ಅಧ್ಯಕ್ಷ ಕೆ.ಸಿ. ಖಾದರ್ ಭಾಷಾ ಸಾಬ್, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಆರಿಫ್ ಜಾನ್ ಸಾಬ್, ಮುಖಂಡರು ಮೊಹಮ್ಮದ್ ಇಲಿಯಾಜ್, ರೋಷನ್, ಆಸಿಫ್, ಅಕ್ರಂ, ಅಫೀದ್ ತನ್ನೂ, ಹಾಸನ ರಕ್ತ ನಿಧಿ ಕೇಂದ್ರದ ಕಾಂತರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಹಲವಾರು ಯುವಕರು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಯೂ ರಕ್ತದಾನದಲ್ಲಿ ಭಾಗವಹಿಸಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))