ಕಾಪು: ಇಲ್ಲಿನ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಪ್ರಚಾರ ವಾಹನದ ಉದ್ಘಾಟನೆ ಮಂಗಳವಾರ ಶ್ರೀ ದೇಗುಲದ ವಠಾರದಲ್ಲಿ ಜರುಗಿತು. ಬ್ರಹ್ಮಕಲಶೋತ್ಸವದ ಹೊರೆಕಾಣಿಕೆ ಸಮಿತಿಯ ಪ್ರಧಾನ ಸಂಚಾಲಕ ಡಾ. ದೇವಿಪ್ರಸಾದ್ ಶೆಟ್ಟಿ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು.ದೇಗುಲದ ಅನುವಂಶಿಕ ಮೊಕ್ತೇಸರ ರತ್ನಾಕರ ರಾಜ್ ಅರಸ್ ಕಿನ್ಯಕ್ಕ ಬಲ್ಲಾಳರು ಮತ್ತು ಪಡುಬಿದ್ರಿ ಪೇಟೆಮನೆ ಭವಾನಿ ಶಂಕರ ಹೆಗ್ಡೆ, ಜೀರ್ಣೕೊದ್ಧಾರ ಸಮಿತಿ ಉಪಾಧ್ಯಕ್ಷ ಪಿ. ರವೀಂದ್ರನಾಥ ಜಿ. ಹೆಗ್ಡೆ, ಪ್ರಧಾನ ಕಾರ್‍ಯದರ್ಶಿ ಮುರಳೀನಾಥ ಶೆಟ್ಟಿ, ದೇಗುಲದ ಕಾರ್‍ಯನಿರ್ವಹಣಾಧಿಕಾರಿ ಕೆ. ರಾಜಗೋಪಾಲ ಉಪಾಧ್ಯಾಯ, ನವೀನ್ ಚಂದ್ರ ಜೆ. ಶೆಟ್ಟಿ, ಜಯ ಶೆಟ್ಟಿ ಪದ್ರ, ಸತೀಶ್ ಶೆಟ್ಟಿ ಗುಡ್ಡೆಚ್ಚಿ, ವೈ. ಸುಕುಮಾರ್, ಚಂದ್ರಹಾಸ ಶೆಟ್ಟಿ, ರತ್ನಾಕರ ಶೆಟ್ಟಿ ನಡುಕೆರೆ, ಜಯ ಕೋಟ್ಯಾನ್, ರಮಾಕಾಂತ ರಾವ್, ಸುಧಾಕರ ಸಾಲ್ಯಾನ್, ಕೃಷ್ಣ ಬಂಗೇರ, ಸೋಮಶೇಖರ್, ಸುರೇಶ್, ಅಶೋಕ್ ಸಾಲ್ಯಾನ್, ಭರತ್ ದೇವಾಡಿಗ, ಪ್ರಕಾಶ್ ದೇವಾಡಿಗ, ಲಕ್ಷ್ಮಣ ಪೂಜಾರಿ, ರವೀಂದ್ರನಾಥ ಶೆಟ್ಟಿ, ಶ್ರೀನಾಥ್ ಹೆಗ್ಡೆ, ರವಿ ಶೆಟ್ಟಿ ಗುಂಡ್ಲಾಡಿ, ಪ್ರಕಾಶ್ ಶೆಟ್ಟಿ ಪಡುಹಿತ್ಲು ಮತ್ತಿತರರು ಉಪಸ್ಥಿತರಿದ್ದರು.