ಸಾರಾಂಶ
ಮಟಪಾಡಿಯ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಚಪ್ಟೇಗಾರ್ ಸಭಾಭವನದಲ್ಲಿ ಆಯೋಜಸಿದ್ದ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳ ದೇಶ ಭಕ್ತಿಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ನಡೆಯಿತು. ಜ್ಯೋತಿಷರತ್ನಂ ಸಾಮಗ ನರಸಿಂಹ ಆಚಾರ್ಯ ಉದ್ಘಾಟಿಸಿದರು.
ಕನ್ನಡಪ್ರಭ ವಾರ್ತೆ ಬ್ರಹ್ಮಾವರ
ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳು ಬೆಳಕಿಗೆ ಬರಲು ವೇದಿಕೆ ಒದಗಿಸಿದಾಗ ಉತ್ತಮ ಸಾಧನೆ ತೋರಲು ಸಾಧ್ಯವಾಗುತ್ತದೆ ಎಂದು ಮಟಪಾಡಿಯ ಜ್ಯೋತಿರ್ನಿಕೇತನಮ್ ಇದರ ಜ್ಯೋತಿಷರತ್ನಂ ಸಾಮಗ ನರಸಿಂಹ ಆಚಾರ್ಯ ಹೇಳಿದರು.ಅವರು ಮಟಪಾಡಿಯ ಫ್ರೆಂಡ್ಸ್ ಯೂತ್ ಕ್ಲಬ್ ವತಿಯಿಂದ ಚಪ್ಟೇಗಾರ್ ಸಭಾಭವನದಲ್ಲಿ ಆಯೋಜಸಿದ್ದ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳ ದೇಶ ಭಕ್ತಿಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಸಂವಿಧಾನದ ಚೌಕಟ್ಟಿನಲ್ಲಿರುವ ಸ್ವತಂತ್ರ ದೇಶದ ಭಾರತವಾಗಿದ್ದು, ಇದು ಸ್ವತಂತ್ರಗೊಂಡು 78 ವರ್ಷಗಳು ಪೂರೈಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪ್ರತಿಭೆಗಳಿಗೆ ದೇಶ ಭಕ್ತಿಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದ ಮೂಲಕ ವೇದಿಕೆಯನ್ನು ನೀಡಿರುವ ಸಂಘಟನೆಯ ಕಾರ್ಯ ಶ್ಲಾಘನಾರ್ಹ ಎಂದು ಶುಭ ಹಾರೈಸಿದರು.ಬ್ರಹ್ಮಾವರ ಹೋಲಿ ಫ್ಯಾಮಿಲಿ ಚರ್ಚ್ನ ಮಟಪಾಡಿ ವಾರ್ಡ್ ಗುರಿಕಾರ ಜೋಸೆಫ್ ಬಾಂಜ್, ಉದ್ಯಮಿ ಯೂಸುಫ್ ಸೈಯ್ಯದ್, ಗುತ್ತಿಗೆದಾರ ಸಂದೇಶ್ ಪೂಜಾರಿ, ಫ್ರೆಂಡ್ಸ್ ಮಟಪಾಡಿ ಯೂತ್ ಕ್ಲಬ್ ಗೌರವ ಸಲಹೆಗಾರ ಸ್ಟೀವನ್ ಸಿಕ್ವೇರಾ, ಅಧ್ಯಕ್ಷ ಶರತ್ ನಾಯಕ್, ಪ್ರಧಾನ ಕಾರ್ಯದರ್ಶಿ ಅಖಿಲೇಶ್ ನಾಯಕ್ ಉಪಸ್ಥಿತರಿದ್ದರು.
ಉದ್ಘಾಟನೆ ಬಳಿಕ ಆಹ್ವಾನಿತ ಸ್ಥಳೀಯ ಶಾಲಾ ವಿದ್ಯಾರ್ಥಿಗಳ ದೇಶ ಭಕ್ತಿಯ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಜರುಗಿತು. ಅಭಿಜಿತ್ ಪಾಂಡೇಶ್ವರ್, ಸುಶ್ಮಿತಾ ಸಾಲಿಗ್ರಾಮ, ಸ್ವಪ್ನಾ ಕಿಶೋರ್ ಭಂಡಾರಿ ತೀರ್ಪುಗಾರರಾಗಿ ಸಹಕರಿಸಿದರು.ಮಾಜಿ ಅಧ್ಯಕ್ಷ ಸುಬ್ರಹ್ಮಣ್ಯ ಆಚಾರ್ಯ ಸ್ವಾಗತಿಸಿದರು. ಸಾಂಸ್ಕೃತಿಕ ಕಾರ್ಯದರ್ಶಿ ಭರತ ನಾಯಕ್ ವಂದಿಸಿದರು. ಅಖಿಲಾ ಹೆಗ್ಡೆ ಪ್ರಾರ್ಥಿಸಿದರು. ಪತ್ರಕರ್ತ ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿದರು.