ಸಾರಾಂಶ
ದೊಡ್ಡಬಳ್ಳಾಪುರ: ವಿಶ್ವ ತಂಬಾಕು ತಡೆ ದಿನಾಚರಣೆ ಅಂಗವಾಗಿ ತಾಲೂಕು ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ದೊಡ್ಡಬಳ್ಳಾಪುರ: ವಿಶ್ವ ತಂಬಾಕು ತಡೆ ದಿನಾಚರಣೆ ಅಂಗವಾಗಿ ತಾಲೂಕು ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಈ ವೇಳೆ ಮಾಹಿತಿ ನೀಡಿದ ವೈದ್ಯರು, ವಿಶ್ವ ಆರೋಗ್ಯ ಸಂಸ್ಥೆ ಪ್ರತಿ ವರ್ಷದ ಮೇ 31 ರಂದು ವಿಶ್ವ ತಂಬಾಕು ರಹಿತ ದಿನವೆಂದು ಘೋಷಿಸಿದೆ. ಯುವಕರು ಸಹವಾಸದಿಂದ ತಂಬಾಕು ವ್ಯಸನಿಗಳಾಗುತ್ತಿರುವುದು ಆತಂಕಕಾರಿ. ಸೇವನೆ ಮಾಡುವವರಿಗಷ್ಟೇ ಅಲ್ಲದೇ ಸಮೀದಲ್ಲಿ ಇರುವವರಿಗೂ ಇದರ ಪರಿಣಾಮ ಬೀರುತ್ತದೆ. ಕ್ಯಾನ್ಸರ್, ಶ್ವಾಸಕೋಶ ಸಂಬಂಧಿ ಕಾಯಿಲೆಗಳು ಹೆಚ್ಚಾಗಿ ತಂಬಾಕು ಸೇವನೆಯಿಂದ ಉಂಟಾಗುತ್ತದೆ. ಯುವಜನರು ತಂಬಾಕು ಮುಕ್ತ ಸಮಾಜ ನಿರ್ಮಾಣದ ಸಂಕಲ್ಪ ಮಾಡಬೇಕು ಎಂದು ಅರಿವು ಮೂಡಿಸಿದರು.ಇದೇ ವೇಳೆ ಸಾರ್ವಜನಿಕರಿಗೆ ಶ್ವಾಸಕೋಶ ತಪಾಸಣಾ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ಡಾ.ವಿನಯ್ಬಾಬು, ಕಾರ್ಯದರ್ಶಿ ಡಾ.ರಾಘವೇಂದ್ರ, ಜಂಟಿ ಕಾರ್ಯದರ್ಶಿ ಡಾ.ಪ್ರಶಾಂತ್ಕೃಷ್ಣ, ಜಂಟಿ ಖಜಾಂಚಿ ಡಾ.ಎಂ.ಬಿ.ಅರ್ಜುನ್, ಮಹಿಳಾ ಘಟಕದ ಅಧ್ಯಕ್ಷೆ ಡಾ.ಆರ್.ಇಂದಿರಾ, ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಎಂ.ಎಸ್.ಗೀತಾ, ರಾಜ್ಯ ಸಮಿತಿ ಸದಸ್ಯ ಡಾ.ಮೂರ್ತಿ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಫೋಟೋ-1ಕೆಡಿಬಿಪಿ3- ದೊಡ್ಡಬಳ್ಳಾಪುರದಲ್ಲಿ ಭಾರತೀಯ ವೈದ್ಯಕೀಯ ಸಂಘದ ನೇತೃತ್ವದಲ್ಲಿ ವಿಶ್ವ ತಂಬಾಕು ತಡೆ ದಿನದ ಅಂಗವಾಗಿ ಸಾರ್ವಜನಿಕರಿಗೆ ಶ್ವಾಸಕೋಶ ತಪಾಸಣೆ ನಡೆಸಿ, ಜಾಗೃತಿ ಮೂಡಿಸಲಾಯಿತು.