ಸಾರಾಂಶ
Bus overturns: Ten people injured
ಹಿರಿಯೂರು: ತಾಲೂಕಿನ ಐಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ ಹತ್ತು ಜನರು ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ. ಹಿರಿಯೂರಿನಿಂದ ದಾವಣಗೆರೆಗೆ ತೆರಳುತ್ತಿದ್ದ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಗಾಯಾಳುಗಳಿಗೆ ಚಿತ್ರದುರ್ಗ, ಹಿರಿಯೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಐಮಂಗಲ ಪೊಲೀಸ್ ಠಾಣೆ ಪ್ರಕರಣ ನಡೆದಿದೆ.
-----ಫೋಟೊ: ತಾಲೂಕಿನ ಐಮಂಗಲ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಸಾರಿಗೆ ಬಸ್
----ಚಿತ್ರ 1