ಸಾರಾಂಶ
ಕುಷ್ಟಗಿಯಿಂದ ಹುಬ್ಬಳ್ಳಿಗೆ ಮೇ 15ರಂದು ರೈಲು ಸಂಚಾರ ಆರಂಭಿಸಿದ್ದು ಪಟ್ಟಣದಿಂದ 2 ಕಿಲೋ ಮೀಟರ್ ದೂರದಲ್ಲಿ ರೈಲ್ವೆ ನಿಲ್ದಾಣವಿದೆ. ಹೀಗಾಗಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಪ್ರಯಾಣಿಕರು ಬೇಡಿಕೆ ಇಟ್ಟ ಹಿನ್ನೆಲೆ ಸಂಚಾರ ಆರಂಭಿಸಲಾಗಿದೆ.
ಕುಷ್ಟಗಿ:
ಇಲ್ಲಿನ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಬಸ್ ಸಂಚಾರ ಆರಂಭವಾಗಿದ್ದು ಪ್ರಯಾಣಿಕರು ಈ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.ಪಟ್ಟಣದ ಸಾರಿಗೆ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಸಂಚರಿಸುವ ಸಾರಿಗೆ ಬಸ್ಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು
ಕುಷ್ಟಗಿಯಿಂದ ಹುಬ್ಬಳ್ಳಿಗೆ ಮೇ 15ರಂದು ರೈಲು ಸಂಚಾರ ಆರಂಭಿಸಿದ್ದು ಪಟ್ಟಣದಿಂದ 2 ಕಿಲೋ ಮೀಟರ್ ದೂರದಲ್ಲಿ ರೈಲ್ವೆ ನಿಲ್ದಾಣವಿದೆ. ಹೀಗಾಗಿ ಬಸ್ ಸೌಲಭ್ಯ ಕಲ್ಪಿಸಬೇಕೆಂದು ಪ್ರಯಾಣಿಕರು ಬೇಡಿಕೆ ಇಟ್ಟ ಹಿನ್ನೆಲೆ ಸಂಚಾರ ಆರಂಭಿಸಲಾಗಿದೆ ಎಂದರು.ಡಿಪೋ ಮ್ಯಾನೇಜರ್ ಸುಂದರಗೌಡ ಪಾಟೀಲ ಮಾತನಾಡಿ, ಬೆಳಗ್ಗೆ 6.30ಕ್ಕೆ ಹಾಗೂ ರಾತ್ರಿ 8.30ಕ್ಕೆ ಬಸ್ ನಿಲ್ದಾಣದಿಂದ ರೈಲು ನಿಲ್ದಾಣಕ್ಕೆ ಬಸ್ ಹೊರಡಲಿದ್ದು ಬೇಕರಿ ಮುಂಭಾಗದಲ್ಲಿ ನಿಲ್ಲಲಿದೆ. ನಂತರ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ರೈಲು ನಿಲ್ದಾಣಕ್ಕೆ ತೆರಳಲಿದ್ದು ಈ ನಡುವೆ ದಾರಿಯಲ್ಲಿ ಯಾರಾದರೂ ಕೈ ಮಾಡಿದರೆ ನಿಲ್ಲಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಈ ವೇಳೆ ಪುರಸಭೆ ಅಧ್ಯಕ್ಷ ಮಹಾಂತೇಶ ಕಲಬಾವಿ, ಜಿಪಂ ಮಾಜಿ ಸದಸ್ಯ ಕೆ. ಮಹೇಶ, ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಉಮೇಶ ಯಾದವ, ವೀರೇಶ ಬಂಗಾರಶೆಟ್ಟರ, ಶಾರದಾ ಶೆಟ್ಟರ, ವಂದನಾ ಗೋಗಿ, ಡಾ. ಪಾರ್ವತಿ ಪಳೋಟಿ ಸೇರಿದಂತೆ ಅನೇಕರು ಇದ್ದರು.ಟಿಕೆಟ್ ದರ ₹ 10ಕುಷ್ಟಗಿ ಪಟ್ಟಣದಿಂದ ರೈಲು ನಿಲ್ದಾಣಕ್ಕೆ ಬಸ್ ಸಂಚಾರಕ್ಕೆ ಚಾಲನೆ ನೀಡಿದ ಶಾಸಕ ದೊಡ್ಡನಗೌಡ ಪಾಟೀಲ ಸೇರಿದಂತೆ ಹತ್ತಾರು ಜನರು ₹ 10 ಟಿಕೇಟ್ ಪಡೆದುಕೊಂಡು ರೈಲು ನಿಲ್ದಾಣದತ್ತ ಪ್ರಯಾಣ ಬೆಳೆಸಿದರು.