ಚಿರತೆ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ರೈತನಿಗೆ ಉಂಟಾಗಿರುವ ನಷ್ಟಕ್ಕೆ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.

ಹನೂರು: ಚಿರತೆ ದಾಳಿಗೆ ಜಾನುವಾರು ಬಲಿಯಾಗಿರುವ ಘಟನೆ ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ಜರುಗಿದೆ. ರೈತ ಸುಮನ್ಸಸ್ ಅವರಿಗೆ ಸೇರಿದ ಜಾನುವಾರನ್ನು ಗ್ರಾಮದ ಸ್ಮಶಾನದ ಬಳಿ ಬರುವ ತಮ್ಮ ಜಮೀನಿನಲ್ಲಿ ಕಟ್ಟಿ ಹಾಕಿದ್ದಾಗ ಚಿರತೆ ದಾಳಿ ಮಾಡಿ ಬಲಿ ಪಡೆದಿದೆ.

ಭಯಭೀತರಾದ ಗ್ರಾಮಸ್ಥರು: ವಿಚಾರ ತಿಳಿದ ಗ್ರಾಮಸ್ಥರು ಭಯಭೀತರಾಗಿದ್ದು, ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅರಣ್ಯ ಅಧಿಕಾರಿಗಳು ಪರಿಶೀಲಿಸಿ ನಾಡಿನತ್ತ ಬರದಂತೆ ಚಿರತೆಯನ್ನು ಸೆರೆಹಿಡಿದು ಬೇರೆಡೆ ಬಿಡಬೇಕು, ಪ್ರಾಣಿಗಳನ್ನು ಕೊಂದು ತಿನ್ನುತ್ತಿರುವ ಚಿರತೆಯಿಂದ ಜನಸಾಮಾನ್ಯರ ಮೇಲೆ ತೊಂದರೆ ಆದರೆ ಅರಣ್ಯ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅರಣ್ಯಾಧಿಕಾರಿಗಳ ಭೇಟಿ: ಚಿರತೆ ದಾಳಿ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ರೈತನಿಗೆ ಉಂಟಾಗಿರುವ ನಷ್ಟಕ್ಕೆ ಪರಿಹಾರ ನೀಡಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೈತರಿಗೆ ಭರವಸೆ ನೀಡಿದ್ದಾರೆ.