ಗೋವು ಸಾಗಣೆ: ಲಾರಿ ಅಡ್ಡಗಟ್ಟಿ ಚಾಲಕನಿಗೆ ಥಳಿತ

| Published : Apr 22 2024, 02:16 AM IST

ಗೋವು ಸಾಗಣೆ: ಲಾರಿ ಅಡ್ಡಗಟ್ಟಿ ಚಾಲಕನಿಗೆ ಥಳಿತ
Share this Article
  • FB
  • TW
  • Linkdin
  • Email

ಸಾರಾಂಶ

ಬೆಳಗಾವಿ: ಅಕ್ರಮ ಗೋವು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದ ಹೊರವಲಯದಲ್ಲಿ ಭಾನುವಾರ ಸಂಜೆ ನಡೆದಿದೆ.

ಬೆಳಗಾವಿ: ಅಕ್ರಮ ಗೋವು ಸಾಗಣೆ ಮಾಡುತ್ತಿದ್ದ ಲಾರಿಯನ್ನು ಅಡ್ಡಗಟ್ಟಿ ಚಾಲಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ನಗರದ ಹೊರವಲಯದಲ್ಲಿ ಭಾನುವಾರ ಸಂಜೆ ನಡೆದಿದೆ.

ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೊರಟ್ಟಿದ್ದ ಲಾರಿಯಲ್ಲಿ ಸುಮಾರು 12ಕ್ಕೂ ಹೆಚ್ಚು ಗೋವುಗಳನ್ನು ಅಕ್ರಮ ಸಾಗಣೆ ಮಾಡಲಾಗುತ್ತಿತ್ತು. ಈ ಸಂದರ್ಭದಲ್ಲಿ ವಿಷಯ ತಿಳಿದ ಹಿಂದೂಪರ ಸಂಘಟನೆಯ 50ಕ್ಕೂ ಅಧಿಕ ಯುವಕರು ಬೆಳಗಾವಿ ಹೊರವಲಯದ ಸುವರ್ಣಸೌಧದ ಬಳಿ ಲಾರಿ ತಡೆದು ಗೋವು ರಕ್ಷಣೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಲಾರಿ ಚಾಲಕನ ಜೊತೆ ವಾಗ್ವಾದ ನಡೆದಿದ್ದು, ಉದ್ರಿಕ್ತರ ಗುಂಪು ಲಾರಿಗೆ ಕಲ್ಲೆಸೆದು ಗಾಜುಗಳನ್ನು ಪುಡಿ ಮಾಡಿದೆ. ಚಾಲಕ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ.

ಘಟನೆ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗಂಭೀರ ಗಾಯಗೊಂಡ ಚಾಲಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.