ಸ್ವಚ್ಛತಾ ಪ್ರಜ್ಞೆ ನಮ್ಮೆಲ್ಲರಲ್ಲೂ ಮೂಡಬೇಕು: ಶಾಸಕ ಸಿ.ಪುಟ್ಟರಂಗಶೆಟ್ಟಿನಗರ ಸ್ವಚ್ಚತೆಗೆ ಎಲ್ಲರ ಸಹಕಾರ ಅಗತ್ಯವಾಗಿದ್ದು, ನಮ್ಮ ಮನೆ, ನಮ್ಮ ಬೀದಿ, ನಮ್ಮ ನಗರ ಎನ್ನುವ ಸಾಮೂಹಿಕ ಸ್ವಚ್ಚತಾ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಮೂಡಬೇಕು. ಆಗಮಾತ್ರ ನಗರ, ಪಟ್ಟಣಗಳು ಸ್ವಚ್ಛ, ಸುಂದರ ನಗರಗಳಾಗಲು ಸಾಧ್ಯವಾಗಲಿದೆ ಎಂದು ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ತಿಳಿಸಿದರು. ಚಾಮರಾಜನಗರದಲ್ಲಿ ತ್ಯಾಜ್ಯ ವಿಂಗಡಣೆ ಮಾಡಿಕೊಡಲು ಹಸಿಕಸ, ಒಣಕಸದ ಡಸ್ಟ್ ಬಿನ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.