• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಯೋಧ್ಯೆ ಮಂದಿರ ಉದ್ಘಾಟನೆ: ಮಾಂಸ ಮಾರಾಟ ನಿಷೇಧ
ಚಾಮರಾಜನಗರಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಹಿನ್ನೆಲೆ ವಿಶೇಷ ಸಭೆ ನಡೆಸಿ ಗ್ರಾಪಂ ಸದಸ್ಯರು ಮಾಂಸ ಮಾರಾಟ ನಿಷೇಧಿಸುವಂತೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ನಿರ್ಧರಿಸಿದ್ದಾರೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಜನವರಿ 20 ರಿಂದ 22 ರವರೆಗೆ ಗ್ರಾಪಂ ವ್ಯಾಪ್ತಿಯ ಎಲ್ಲಾ ಮಾಂಸದ ಅಂಗಡಿಗಳು ಮತ್ತು ಹೋಟೆಲ್ ಗಳಲ್ಲಿ ಮಾರಾಟ ನಿಷೇಧ ಮಾಡಿ ಗ್ರಾಪಂ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮೂರು ದಿನಗಳವರೆಗೆ ಮಾರಾಟ ಸ್ಥಗಿತಗೊಳಿಸಬೇಕು. ಮಾಂಸಾಹಾರ ಹೋಟೆಲ್ ಸೇರಿದಂತೆ ಮಾಂಸ ಮಾರಾಟ ಹೋಟೆಲ್ ಗಳಿಗೂ ನೋಟೀಸ್ ನೀಡಲಾಗಿದೆ. ಈ ನಡುವೆ ಮಾಂಸ ಮಾರಾಟ ಕಂಡುಬಂದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೋಟೀಸ್ ನಲ್ಲಿ ತಿಳಿಸಲಾಗಿದೆ.
ತ್ರಿವಿಧ ದಾಸೋಹಿಯ 5ನೇ ಪುಣ್ಯಸ್ಮರಣೆ ಆಚರಣೆ
ಕೊಳ್ಳೇಗಾಲನಡೆದಾಡುವ ದೇವರು, ತ್ರಿವಿಧ ದಾಸೋಹಿ ಡಾ.ಶಿವಕುಮಾರ ಸ್ವಾಮಿಜೀರವರ 5 ನೇ ವರ್ಷದ ಪುಣ್ಯಸ್ಮರಣೆಯನ್ನು ಇಲ್ಲಿನ ಮೋದಿ ಟೀ ಸ್ಟಾಲ್ ಸ್ನೇಹಿತರ ಬಳಗದ ವತಿಯಿಂದ ಆಚರಣೆ ಮಾಡಿದರು.ಪಟ್ಟಣದ ಜನನಿ ಆಸ್ಪತ್ರೆಯ ಹಿಂಭಾಗದಲ್ಲಿರುವ ಮೋದಿ ಟೀ ಸ್ಟಾಲ್ ನಲ್ಲಿ ಇಂದು ನಡೆದ ಪುಣ್ಯಸ್ಮರಣೆಯಲ್ಲಿ ಶಿವಕುಮಾರಸ್ವಾಮಿಜೀ ಭಾವಚಿತ್ರವನ್ನು ಇಟ್ಟು ಪೂಜೆ ಸಲ್ಲಿಸಲಾಯಿತು. ಬಳಿಕ ನೆರೆದಿದ್ದ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡಿದರು. ತಿಮ್ಮರಾಜೀಪುರ, ಬೂದಿತಿಟ್ಟು, ಮುಡಿಗುಂಡ, ಮುಳ್ಳೂರು, ಮಧುವನಹಳ್ಳಿ ಸೇರಿದಂತೆ ಗ್ರಾಮಾಂತರದ ಭಜನಾ ತಂಡದ ವತಿಯಿಂದ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನದವರೆಗೆ ಭಜನೆಯನ್ನು ನಡೆಸಿಕೊಟ್ಟರು.
ಸಿದ್ದಗಂಗಾಶ್ರೀಗಳ 5 ನೇ ಪುಣ್ಯ ಸ್ಮರಣೋತ್ಸವ
ಚಾಮರಾಜನಗರ ಸಿದ್ದಗಂಗಾ ಕ್ಷೇತ್ರದ ಲಿಂಗೈಕ್ಯ ಶ್ರೀ ಶಿವಕುಮಾರಸ್ವಾಮಿಗಳ ೫ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಭಕ್ತವೃಂದದಿಂದ ವಿಶೇಷ ಪೂಜೆ, ಅನ್ನಸಂತರ್ಪಣೆ ಹಾಗೂ ಸಿದ್ದಗಂಗಾಶ್ರಿಗಳ ಕುರಿತ ಪುಸ್ತಕ ಬಿಡುಗಡೆ ಮಾಡಿ, ಉಚಿತವಾಗಿ ಹಂಚಿಕೆ ಮಾಡಲಾಯಿತು. ಉದ್ಯಾನವನದ ಮುಂಭಾಗದ ರಸ್ತೆಯಲ್ಲಿ ಶಾಮಿಯಾನ ಹಾಕಿ ಶ್ರೀ ಸಿದ್ದಗಂಗಾಶ್ರಿಗಳ ಭಾವವಿತ್ರವಿಟ್ಟು ಪೂಜೆ ಸಲ್ಲಿಸಲಾಯಿತು. ಹಿರಿಯರು ಹಾಗೂ ಮಾಜಿ ನಗರಸಭಾ ಸದಸ್ಯ ಡಾ. ಗಣೇಶ್‌ ದಿಕ್ಷೀತ್ ಶ್ರೀಗಳ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಸಿದ್ದಗಂಗಾ ಶ್ರೀಗಳ ಕರುಣೆ ಮತ್ತು ನಿಷ್ಠೆ ಕೃತಿಯನ್ನು ಬಿಡುಗಡೆ ಮಾಡಿದರು. ಬಳಿಕ ಸಾರ್ವಜನಿಕರಿಗೆ ಪ್ರಸಾದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಶ್ರದ್ಧಾ ಭಕ್ತಿಯೊಂದಿಗೆ ತ್ರಿವಿಧ ದಾಸೋಹಿಯ ಪುಣ್ಯಸ್ಮರಣೆ
ಚಾಮರಾಜನಗರತ್ರಿವಿಧ ದಾಸೋಹಿ, ದೇಶ ಕಂಡ ಆಧುನಿಕ ಸಂತ, ಸಿದ್ಧಗಂಗೆಯ ಪುಣ್ಯ ಪುರುಷ ಡಾ. ಶಿವಕುಮಾರ ಸ್ವಾಮೀಜಿಯವರ ೫ನೇ ಪುಣ್ಯ ಸ್ಮರಣೆಯನ್ನು ದಾಸೋಹ ದಿನವನ್ನಾಗಿ ಜಿಲ್ಲಾ ಕೇಂದ್ರದ ವಿವಿಧೆಡೆ ಶ್ರದ್ಧಾ ಭಕ್ತಿಯೊಂದಿಗೆ ಆಚರಿಸಿ, ಆನ್ನದಾಸೋಹ ಮಾಡಲಾಯಿತು. ನಗರದ ಜಿಲ್ಲಾಡಳಿತ ಭವನದ ಬಳಿ ಇರುವ, ಅಧ್ಯಕ್ಷ ಹೋಟೆಲ್ ಮುಂಭಾಗ ಸೇರಿದಂತೆ ವಿವಿಧೆಡೆ ಡಾ. ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರ ಇಟ್ಟು ಪೂಜೆ ಸಲ್ಲಿಸಿ, ಸಾರ್ವಜನಿಕರಿಗೆ ಅನ್ನದಾಸೋಹ ಮಾಡಲಾಯಿತು. ಗೌಡಹಳ್ಳಿ ಮಠದ ಮರಿ ತೋಂಟದಾರ್ಯ ಸ್ವಾಮೀಜಿ ಮಾತನಾಡಿ ಈ ನಾಡು ಕಂಡ ಪುಣ್ಯ ಪುರುಷರಲ್ಲಿ ಡಾ. ಶಿವಕುಮಾರ ಸ್ವಾಮೀಜಿ ಒಬ್ಬರು, ಸಹಸ್ರಾರು ವಿದ್ಯಾರ್ಥಿಗಳಿಗೆ ಅನ್ನ, ವಿದ್ಯೆ ಆಶ್ರಯ ನೀಡಿ ಅವರ ಬದುಕನ್ನು ಬೆಳಗಿದ ಪುಣ್ಯಾತ್ಮರು ಎಂದರು.
ಹವಾಮಾನ ಬದಲಾವಣೆಯಲ್ಲಿ ಸಿಲುಕಿದ ಕೃಷಿ
ಚಾಮರಾಜನಗರ ಹವಾಮಾನ ಬದಲಾವಣೆ ಸುಳಿಯಲ್ಲಿ ಕೃಷಿ ಸಿಲುಕಿದೆ ಎಂದು ತುಮಕೂರು ಹಿರೇಹಳ್ಳಿ ಕೆವಿಕೆ ಮುಖ್ಯಸ್ಥ ಡಾ.ಎನ್‌. ಲೋಗಾನಂದನ್‌ ಆತಂಕ ವ್ಯಕ್ತಪಡಿಸಿದರು. ನಗರದ ಜೆ.ಎಚ್‌. ಪಟೇಲ್‌ ಸಭಾಂಗಣದಲ್ಲಿ ಭಾನುವಾರ ಕೊಳ್ಳೇಗಾಲದ ಜೆಎಸ್‌ಬಿ ಪ್ರತಿಷ್ಠಾನ, ತುಮಕೂರಿನ ಗಾಂಧೀಜಿ ಸಹಜ ಬೇಸಾಯ ಶಾಲೆ, ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ರೈತ ಸಂಘ ಹಾಗೂ ಹಸಿರು ಸೇನೆ ಸಾಮೂಹಿಕ ನಾಯಕತ್ವದ ವತಿಯಿಂದ ಕೃಷಿ ಮತ್ತು ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮತ್ತು ನಿರ್ವಹಣೆ ಕುರಿತು ಏರ್ಪಡಿಸಲಾಗಿದ್ದ ಕಾರ್ಯಾಗಾರದಲ್ಲಿ ಮಾತನಾಡಿದರು.
ವಿಜೃಂಭಣೆಯಿಂದ ಜರುಗಿದ ಕಸ್ತೂರು ಬಂಡಿ ಜಾತ್ರೆ
ಚಾಮರಾಜನಗರತಾಲೂಕಿನ ಕಸ್ತೂರು ದೊಡ್ಡಮ್ಮತಾಯಿ ಬಂಡಿ ಜಾತ್ರೆ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಡಗರ ಸಂಭ್ರಮದಿಂದ ಜರುಗಿತು. ವಿವಿಧ ಗ್ರಾಮಗಳ ಬಂಡಿಗಳು ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕುವುದರೊಂದಿಗೆ ಜಾತ್ರೆ ನಡೆಯಿತು. ಇದು ನೂತನ ವರ್ಷದ ಮೊದಲ ಜಾತ್ರೆಯಾಗಿದ್ದು ಹದಿನಾರು ಹಳ್ಳಿಗಳ ಬಂಡಿಗಳು ಈ ಕಸ್ತೂರು ಬಂಡಿ ಜಾತ್ರೆಯಲ್ಲಿ ಸಮಾಗಮಗೊಂಡವು.
ಯಳಂದೂರು ತಾಲೂಕು ಕಚೇರಿಗೆ ಡಿಸಿ ಶಿಲ್ಪಾನಾಗ್ ಭೇಟಿ
ಯಳಂದೂರುಪಟ್ಟಣದ ತಾಲೂಕು ಕಚೇರಿಗೆ ಜಿಲ್ಲಾಧಿಕಾರಿ ಶಿಲ್ಪನಾಗ್ ಭೇಟಿ ನೀಡಿ ಕಚೇರಿಯ ಕಡತಗಳನ್ನು ಪರಿಶೀಲನೆ ನಡೆಸಿದರು. ಇಲಾಖೆಯ ಅಧಿಕಾರಿಗಳ ಜೊತೆ ತಾಲೂಕು ಕಚೇರಿಯ ಕಡತಗಳ ಪರಿಶೀಲನೆ ಹಾಗೂ ಪ್ರತಿದಿನ ನಡೆಯುತ್ತಿರುವ ಸಾರ್ವಜನಿಕರ ಕೆಲಸಗಳು, ಕಚೇರಿಯ ಸ್ವಚ್ಛತೆ ಬಗ್ಗೆ ತಾಲೂಕು ನೋಂದಣಿ ಅಧಿಕಾರಿಗಳ ಕಚೇರಿಗೆ ಭೇಟಿ ಕೊಟ್ಟು ಮಾಹಿತಿ ಪಡೆದುಕೊಂಡರು.
ಟಗರಪುರ ಗ್ರಾಪಂನಲ್ಲಿ ಕಾಟಚಾರಕ್ಕೆ ಕೂಸಿನ ಮನೆ
ರಾಜ್ಯದಲ್ಲಿ 6 ಸಾವಿರಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಿದ್ದು, 4 ಸಾವಿರ ಪಂಚಾಯಿತಿಗಳಲ್ಲಿ ಕೂಸಿನ ಮನೆ ಯೋಜನೆ ಪ್ರಾರಂಭವಾಗಿದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಯಲ್ಲಿ 23 ಗ್ರಾಪಂನಲ್ಲಿ ಕೂಸಿನ ಮನೆ ನಿರ್ಮಾಣಕ್ಕೆ ಅವಕಾಶವಾಗಿದೆ.
ಕ್ರೀಡೆಯಿಂದ ಸ್ನೇಹ ಸೌಹಾರ್ದತೆ ಹೆಚ್ಚಾಗಬೇಕು: ಶಾಸಕ ದರ್ಶನ್ ಧ್ರುವನಾರಾಯಣ
ಕ್ರೀಡೆಗಳಿಂದ ಯುವಸಮೂಹ ಒಗ್ಗೂಡುವುದರೊಂದಿಗೆ ಸ್ನೇಹ, ಸೌಹಾರ್ದತೆ ಹೆಚ್ಚಾಗುವಂತಾಗಬೇಕು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಅಭಿಪ್ರಾಯಪಟ್ಟರು.
ಗಡಿ ಜಿಲ್ಲೆಗೂ ಉಂಟು ಶ್ರೀ ರಾಮನ ನಂಟು
ಚಾಮರಾಜನಗರ ಗಡಿಯಲ್ಲಿರುವ ತಮಿಳುನಾಡಿನ ಸತ್ಯಮಂಗಲಂ ಅರಣ್ಯದ ಮೂಲಕ ಲಂಕೆಯತ್ತ ಪಯಣ ಬೆಳೆಸಿದ್ದ ಶ್ರೀರಾಮ. ಸೀತಾಪಹರಣ ವೇಳೆ ಸೀತೆಯನ್ನು ಅರಸಿ ಹೊರಟಿದ್ದಾಗ ಕಾನನದಲ್ಲಿ ದಾರಿ ಕಾಣದಾಗಿದ್ದಾಗ ಬಾಣ ಉಡಿ ಬೆಟ್ಟ ಸೀಳಿ, ಲಂಕೆಗೆ ದಾರಿ ಮಾಡಿಕೊಂಡಿದ್ದ ಎಂಬ ಅದೇ ರಾಮರ ಪಾದ.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 440
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved