• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾನೂನು ಅರಿವಿನ ಜೊತೆಗೆ ಧಾರ್ಮಿಕ ಚಿಂತನೆ ಅಗತ್ಯ: ಶ್ರೀಧರ್
ಚಾಮರಾಜನಗರಪ್ರಸ್ತುತ ಸನ್ನಿವೇಶದಲ್ಲಿ ಸುಸಂಸ್ಕೃತರಾಗಲು ಕಾನೂನು ಅರಿವಿನ ಜೊತೆಗೆ ಧಾರ್ಮಿಕ ಚಿಂತನೆಗಳು ಅಗತ್ಯವಾಗಿದೆ ಎಂದು ಜಿಲ್ಲಾ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ, ಕಾರ್ಯದರ್ಶಿ ಹಾಗೂ ಸತ್ರ ನ್ಯಾಯಾಧೀಶ ಎಂ. ಶ್ರೀಧರ್ ಹೇಳಿದರು.ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜನಾರ್ಧನ ಪ್ರತಿಷ್ಠಾನದ ವತಿಯಿಂದ ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಾಧೀನ ಕೈದಿಗಳಿಗೆ ಹಮ್ಮಿಕೊಂಡಿದ್ದ ಕಾನೂನು ಅರಿವು ಮತ್ತು ಧಾರ್ಮಿಕ ಚಿಂತನೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹುಟ್ಟಿನಿಂದ ಸಾಯುವವರೆಗೂ ಮನುಷ್ಯ ಒಂದಲ್ಲ ಒಂದು ಕಾನೂನಿನ ಅಡಿ ಬದುಕಲೇ ಬೇಕು, ಈ ಕಾನೂನಿನ ಅರಿವಿನ ಜೊತೆಗೆ, ನಮ್ಮ ಸಾಂಸ್ಕೃತಿಕ ಪರಂಪರೆ ಧಾರ್ಮಿಕ ಚಿಂತನೆಗಳನ್ನು ಮೈಗೂಡಿಸಿಕೊಂಡಾಗ ನಾವು ಸುಸಂಸ್ಕೃತ ಜೀವನನದ ಜೊತಗೆ ಒಳ್ಳೆಯ ಸಮಾಜವನ್ನು ಕಟ್ಟಬಹುದು ಎಂದರು.
ಮಕ್ಕಳ ಮೇಲೆ ಒತ್ತಡ ಹೇರಬೇಡಿ ಶಾಸಕ ಗಣೇಶ್‌ ಪ್ರಸಾದ್‌
ಗುಂಡ್ಲುಪೇಟೆಬೇಗೂರು ಗ್ರಾಮದ ಲಿಟಲ್‌ ಫ್ಲವರ್‌ ಶಾಲೆಗೆ ನನ್ನ ತಂದೆ ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಅಡಿಗಲ್ಲು ಹಾಕಿದ್ದರು ಆದರೀಗ ನಾನು ಶಾಲೆಯ ಬೆಳ್ಳಿ ಮಹೋತ್ಸವ ಉದ್ಘಾಟಿಸುತ್ತಿರುವುದು ಖುಷಿಯ ವಿಚಾರ ಎಂದು ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹೇಳಿದರು. ತಾಲೂಕಿನ ಬೇಗೂರು ಲಿಟಲ್‌ ಫ್ಲವರ್‌ ಶಾಲೆಯ ಬೆಳ್ಳಿ ಮಹೋತ್ಸವ ಸಮಾರಂಭ ಉದ್ಘಾಟಿಸಿ ಶಾಲೆಯ ಆರಂಭದಿಂದ ಇಲ್ಲಿಯ ತನಕ ನನ್ನ ಕುಟುಂಬ ಈ ಸಂಸ್ಥೆಗೆ ಸಹಕಾರ ನೀಡುತ್ತ ಬಂದಿದೆ ನನ್ನ ಸಹಕಾರ ಸದಾ ಇರಲಿದೆ ಎಂದರು. ಮಹದೇವಪ್ರಸಾದ್‌ ಟ್ರಸ್ಟ್‌ ಹಾಗೂ ಸಂಗಮ ಪ್ರತಿಷ್ಠಾನದಿಂದ ಕ್ಷೇತ್ರದ ಮಕ್ಕಳ ಉದ್ಯೋಗ ಸಿಗಬೇಕು ಎಂಬ ಕಾಳಜಿಯಿಂದ ತರಬೇತಿ ಹಾಗೂ ಕಾರ್ಯಾಗಾರ ನಡೆಸುತ್ತಿದ್ದು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಹಿಟ್ ಆ್ಯಂಡ್ ರನ್ ಕಾನೂನು ವಿರೋಧಿಸಿ ಬೃಹತ್ ಪ್ರತಿಭಟನೆ
ಚಾಮರಾಜನಗರಕೇಂದ್ರ ಸರ್ಕಾರ ಜಾರಿ ತರಲು ನಿರ್ಧರಿಸಿರುವ ನೂತನ ಹಿಂಟ್ ಅಂಡ್ ರನ್ ಕಾನೂನು ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಲಾರಿ ಮಾಲೀಕರ ಹಾಗೂ ಲಾರಿ ಚಾಲಕರ ಸಂಘ ಹಾಗೂ ವಿವಿಧ ಸಂಘಗಳಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.ನಗರದ ಲಾರಿ ನಿಲ್ದಾಣದಿಂದ ಜಿಲ್ಲಾಡಳಿತ ಭವನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಡಳಿತ ಭವನದ ಆವರಣದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಡಳಿತದ ಮೂಲಕ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು.
ಲಿಂಗತ್ವ ಅಲ್ಪಸಂಖ್ಯಾತರು ಶಿಕ್ಷಣ, ಉನ್ನತ ಹುದ್ದೆಗಳ ಗುರಿ ಹೊಂದಬೇಕು
ಚಾಮರಾಜನಗರಲಿಂಗತ್ವ ಅಲ್ಪಸಂಖ್ಯಾತರು ಹೆಚ್ಚಿನ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಏರುವ ಗುರಿ ಇಟ್ಟುಕೊಂಡು ಸಮಾಜದಲ್ಲಿ ಉತ್ತಮ ಸ್ಥಾನ ಪಡೆಯಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ಸಲಹೆ ನೀಡಿದರು. ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮ, ಸಮತಾ ಸೊಸೈಟಿ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟಗಳ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೈಂಗಿಕ ಮತ್ತು ಅಲ್ಪಸಂಖ್ಯಾತರ ಅರಿವು ಹಾಗೂ ಮತದಾನದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬರಗಿ ಗ್ರಾಪಂನಿಂದ ಪ್ರಾಯೋಗಿಕವಾಗಿ ಮುಟ್ಟಿನ ಕಪ್‌ ವಿತರಣೆ
ಗುಂಡ್ಲುಪೇಟೆತಾಲೂಕಿನ ಬರಗಿ ಗ್ರಾಮದಲ್ಲಿ ಮಹಿಳೆಯರಿಗೆ ಬರಗಿ ಗ್ರಾಪಂನಿಂದ ಪ್ರಾಯೋಗಿಕವಾಗಿ ಮುಟ್ಟಿನ ಕಪ್‌ ವಿತರಣೆ ಕಾರ್ಯಕ್ರಮ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬರಗಿ ಗ್ರಾಪಂನಲ್ಲಿ ಚಾಲನೆ ದೊರೆತಿದೆ.ತಾಲೂಕಿನ ಬರಗಿ ಗ್ರಾಪಂನಲ್ಲಿ ಬುಧವಾರ ನಡೆದ ಮಹಿಳಾ ಗ್ರಾಮಸಭೆ ಹಾಗೂ ಮುಟ್ಟಿನ ಕಪ್‌ ವಿತರಣೆ ಸಮಾರಂಭದದಲ್ಲಿ ಮಹಿಳೆಯರ ಕುಂದು ಕೊರತೆ ಆಲಿಸಿದ ಬಳಿಕ ಸಭೆಯಲ್ಲಿ ಹಾಜರಿದ್ದ ೨೫ ಮಂದಿ ಮಹಿಳೆಯರಿಗೆ ಮುಟ್ಟಿನ ಕಪ್‌ನ್ನು ಗ್ರಾಪಂ ಅಧ್ಯಕ್ಷ ಸೂರ್ಯ ಪ್ರಕಾಶ್‌ ವಿತರಿಸಿದರು.
ಈಡೇರದ ರಾಹುಲ್ ಗಾಂಧಿ ಗ್ಯಾರಂಟಿ: ಆಕ್ಸಿಜನ್ ದುರಂತ ಸಂತ್ರಸ್ತರ ಅಳಲು
ಚಾಮರಾಜನಗರ: ಭಾರತ್ ಜೋಡೋ ಯಾತ್ರೆ ಹಾಗೂ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ನೀಡಿದ್ದ ನೌಕರಿ ಗ್ಯಾರಂಟಿ ಇನ್ನೂ ಈಡೇರದೆ ಆಮ್ಲಜನಕ ದುರಂತ ಸಂತ್ರಸ್ತರು ಕಣ್ಣೀರಿಟ್ಟಿದ್ದಾರೆ. ಕೊರೊನಾ ಎರಡನೇ ಅವಧಿಯಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಸಮಯದಲ್ಲಿ ಆಮ್ಲಜನಕ ಸಿಗದ ಪರಿಣಾಮ 24 ಮಂದಿಗೂ ಅಧಿಕ (ಸರ್ಕಾರದ ವರದಿಯಲ್ಲಿ 24, ಸಂತ್ರಸ್ತರ ಪ್ರಕಾರ 36 ಮಂದಿ) ಅಸುನೀಗಿದ್ದರು. ನ್ಯಾಯಾಲಯದ ಆದೇಶದಂತೆ ಕೆಲವರಿಗೆ ಅಲ್ಪಸ್ವಲ್ಪ ಪರಿಹಾರ ಸಿಕ್ಕಿದರೂ ಕಾಂಗ್ರೆಸ್ ನಾಯಕರು ಕೊಟ್ಟಿದ್ದ ಉದ್ಯೋಗ ಗ್ಯಾರಂಟಿ ಮಾತ್ರ ಈಡೇರಿಲ್ಲ. ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಸಿಜನ್ ಸಂತ್ರಸ್ತರ ಜೊತೆ ಸಂವಾದ ನಡೆಸಿದ್ದರು. ನಮ್ಮ ಸರ್ಕಾರ ಬಂದೇ ಬರಲಿದ್ದು, ಕುಟುಂಬದ ಒಬ್ಬರಿಗೆ ನೌಕರಿ ಕೊಡುತ್ತೇವೆ ಎಂದು ಭರವಸೆ ನೀಡಿದ್ದರು.
ವಿಪತ್ತು ನಿರ್ವಹಣೆ ಅರಿವು ಅಗತ್ಯ
ಚಾಮರಾಜನಗರಅಂಗವಿಕಲರಿಗೆ ವಿಪತ್ತು ನಿರ್ವಹಣೆ ಅರಿವು ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು.ನಗರದ ಜಿಲ್ಲಾಡಳಿತ ಭವನದ ಹಳೆ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮೊಬಿಲಿಟಿ ಇಂಡಿಯಾ ಸಹಯೋಗದಲ್ಲಿ ಆಯೋಜಿಸಿದ್ದ ಜಿಲ್ಲೆಯ ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರಿಗೆ ವಿಪತ್ತು ನಿರ್ವಹಣೆಯಲ್ಲಿ ವಿಕಲಚೇತನರ ಒಳಗೊಳ್ಳುವಿಕೆ ಮತ್ತು ಮನೋ ಸಾಮಾಜಿಕ ಆರೈಕೆ ಕುರಿತು ಕಾರ್ಯಾಗಾರ ಹಾಗೂ ಮತದಾನದ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಲಹೆ: ಕುಲಪತಿ ಪ್ರೊ.ಗಂಗಾಧರ್
ಚಾಮರಾಜನಗರ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವನೆ ಬೆಳೆಸಿಕೊಳ್ಳಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ.ಆರ್. ಗಂಗಾಧರ್ ಸಲಹೆ ನೀಡಿದರು. ಚಾಮರಾಜನಗರ ವಿಶ್ವವಿದ್ಯಾನಿಲಯದ ನಿಜಗುಣ ಸಭಾಂಗಣದಲ್ಲಿ ನೆಹರು ಯುವ ಕೇಂದ್ರ, ಚಾಮರಾಜನಗರ ವಿಶ್ವವಿದ್ಯಾನಿಲಯ, ಜೈ ಭುವನೇಶ್ವರಿ ಕನ್ನಡ ಯುವ ವೇದಿಕೆ ಸಹಯೋಗದಲ್ಲಿ ೧೬೧ನೇ ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಭಾಗವಹಿಸುವಿಕೆ ದಿನದ ಪ್ರಯುಕ್ತ ಏರ್ಪಡಿಸಿದ್ದ ಚೀಟಿ ನೋಡಿ ಮಾತನಾಡುವ ಸ್ಪರ್ಧೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೂಲಿ ಮಾಡದಿದ್ದರೂ ಫಲಾನುಭವಿ ಖಾತೆಗೆ ಹಣ ವರ್ಗ!?
ಕೊಳ್ಳೇಗಾಲತಾಲೂಕಿನ ದೊಡ್ಡಿಂದುವಾಡಿ ಗ್ರಾಪಂನಲ್ಲಿ ಬಸವ ವಸತಿ ಯೋಜನೆಯಡಿ ಕೂಲಿ ಮಾಡದಿದ್ದರೂ ಫಲಾನುಭವಿಯಲ್ಲದ ವ್ಯಕ್ತಿಯೊಬ್ಬರ ಖಾತೆಗೆ ಹಣ ಹಾಕುವ ಮೂಲಕ ಗ್ರಾಪಂನ ಪಿಡಿಓ ಕರ್ತವ್ಯಲೋಪ ಎಸಗುವ ಜೊತೆಗೆ ವಿವಾದಕ್ಕೂ ಈಡಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಪಂನ ಪ್ರಸಾದ್ ಗ್ರಾಪಂ ವ್ಯಾಪ್ತಿಯಲ್ಲಿ ಬಸವ ವಸತಿ ಯೋಜನೆಯಡಿ ಕೂಲಿ ಕೆಲಸವನ್ನೆ ನಿರ್ವಹಿಸಿರಲಿಲ್ಲ, ಹಾಗಿದ್ದರೂ ಆತನ ದೊಡ್ಡಿಂದುವಾಡಿ ಗ್ರಾಮ ಶಾಖೆ ಸಂಖ್ಯೆಯ 64142948060 ಖಾತೆಗೆ ದಿನಾಂಕ 10-11-2023ರಲ್ಲಿ 2 ಬಾರಿ ಕ್ರಮವಾಗಿ 1580 ,1896 ರು.ಗಳನ್ನು ಹಾಕುವ ಮೂಲಕ ಒಟ್ಟಾರೆ (3476 ರು.ಗಳನ್ನು) ಖಾತೆಗೆ ಜಮೆಯಾಗಿದ್ದು ಹಲವು ಸಂಶಯಕ್ಕೆಡೆ ಮಾಡಿಕೊಟ್ಟಿದೆ.
ನುಡಿದಂತೆ ನಡೆಯುವ ಸರ್ಕಾರ ನಮ್ಮದು: ಸಿ. ಪುಟ್ಟರಂಗಶೆಟ್ಟಿ
ಕುಡಿಯುವ ನೀರಿಗಾಗಿ ೨೦ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಪಟ್ಟಿಯಲ್ಲಿದ್ದ ಅನೆಮಡುವಿನ ಕೆರೆಗೆ ೧.೦೨ ಕೋಟಿ ರೂ. ವೆಚ್ಚದಲ್ಲಿ ಪೈಪ್‌ಲೈನ್ ಮಾಡಿ ನೀರು ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಬಾಗಿನ ಅರ್ಪಿಸಿದರು.
  • < previous
  • 1
  • ...
  • 420
  • 421
  • 422
  • 423
  • 424
  • 425
  • 426
  • 427
  • 428
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved