• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಂಗಳ ಡೇರಿ ಚುನಾವಣೇಲಿ ಕೈ ಗೆ ಭರ್ಜರಿ ಜಯ!
ಗುಂಡ್ಲುಪೇಟೆತಾಲೂಕಿನ ಹಂಗಳ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಖಂಡರಾದ ಕಾಡಾ ಮಾಜಿ ಅಧ್ಯಕ್ಷ ಎಚ್‌.ಎಸ್.ನಂಜಪ್ಪ ಬೆಂಬಲಿಗರು ೧೨ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ್ದಾರೆ. ಈ ಬಾರಿಯ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲೇಬೇಕು ಹಠಕ್ಕೆ ಬಿದ್ದಿದ್ದ ಹಂಗಳ ಗ್ರಾಮದ ಬಿಜೆಪಿಗರಿಗೆ ಡೇರಿ ಚುನಾವಣೆಯಲ್ಲಿ ಕೇವಲ ಒಂದು ಸ್ಥಾನವನ್ನು ಗೆಲ್ಲಲಾರದೆ ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಹುಲುಗಿನ ಮುರಡಿಯಲ್ಲಿ ಅದ್ಧೂರಿ ಸಂಕ್ರಾಂತಿ ಜಾತ್ರೆ
ತಾಲೂಕಿನ ತೆರಕಣಾಂಬಿ ಬಳಿಯ ವೆಂಕಟರಮಣಸ್ವಾಮಿ ಬೆಟ್ಟದಲ್ಲಿ ಮಧ್ಯಾಹ್ನ ೧.೧೫ ರ ಸಮಯದಲ್ಲಿ ಗರುಢಯೊಂದು ರಥ (ತೇರು) ಹಾಗೂ ಗೋಪುರದ ಮೇಲೆ ಹಾರಾಟ ನಡೆಸಿದ ತಕ್ಷಣ ತಹಸೀಲ್ದಾರ್ ಟಿ.ರಮೇಶ್‌ ಬಾಬು ತೆಂಗಿನ ಕಾಯಿ ಒಡೆಯುವ ಮೂಲಕ ರಥೋತ್ಸವಕ್ಕೆ ಚಾಲನೆ ನೀಡಿದರು. ರಾಜ್ಯದ ಭಕ್ತರು ಸೇರಿದಂತೆ ತಮಿಳುನಾಡು ಹಾಗು ಕೇರಳದ ಸಾವಿರಾರು ಮಂದಿ ಭಕ್ತರು ರಥವನ್ನು ಗೋವಿಂದ….ಗೋವಿಂದ ಎಂಬ ನಾಮ ಸ್ಮರಣೆಯೊಂದಿಗೆ ರಥವನ್ನು ಮಕ್ಕಳು, ಮಹಿಳೆಯರೆನ್ನದೆ ಬೆಟ್ಟಕ್ಕೆ ಆಗಮಿಸಿ ದೇವಸ್ಥಾನದ ಒಂದು ಸುತ್ತು ಎಳೆದರು. ಎಲ್ಲೆಂದರಲ್ಲೂ ಮಕ್ಕಳು, ಮಹಿಳೆಯರೆನ್ನದೆ ದೇವಸ್ಥಾನದ ಬಳಿ ನಿಂತು ರಥ ತೆರಳುವುದನ್ನು ಕಂಡ ಭಕ್ತರು ಪುಳಕಿತರಾದರು. ಧನುರ್ಮಾಸ ಮುಗಿದ ಕಾರಣ ನೂರಾರು ಮಂದಿ ನವ ಜೋಡಿಗಳು ಬಂದು ತೇರಿಗೆ ಹಣ್ಣು-ಜವನ ಎಸೆದರು.
ನಂದೀಶ್ ಪ್ರಕರಣದಲ್ಲಿ ಕರ್ತವ್ಯಲೋಪ ಎಎಸೈ, ಮುಖ್ಯಪೇದೆ ಅಮಾನತು
ಲಿಂಗಣಾಪುರ ಗ್ರಾಮದ ನಂದೀಶ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ಸ್ವೀಕರಿಸಲು ನಿರ್ಲಕ್ಷ್ಯವಹಿಸಿ ಕರ್ತವ್ಯಲೋಪ ಎಸಗಿದ ಹಿನ್ನೆಲೆ ಪಟ್ಟಣ ಠಾಣೆಯ ಎಎಸೈ ಶಿವಶಂಕರ್, ಮುಖ್ಯಪೇದೆ ರಘು ಎಂಬುವರನ್ನು ಅಮಾನತುಗೊಳಿಸಿ ಎಸ್ಪಿ ಪದ್ಮಿನಿ ಸಾಹೂ ಆದೇಶ ಹೊರಡಿಸಿದ್ದಾರೆ. ಕಾಯ್ದೆದಾಖಲಿಸುವ ಬೆದರಿಕೆ ಹಾಕಿದ್ದ ಕುರಿತು ಎಎಸ್ಪಿಯವರಿಗೆ ಜ.8ರಂದು ಲಿಖಿತ ದೂರು ನೀಡಲಾಗಿತ್ತು. ಅವರ ವರ್ತನೆಯಿಂದ ಕಿರಣ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಿಲ್ಲೆಯಾದ್ಯಂತ ಸಂಭ್ರಮದಿಂದ ಸಂಕ್ರಾಂತಿ ಆಚರಣೆ
ಚಾಮರಾಜನಗರಸೂರ್ಯಾರಾಧನೆಯ ಹಬ್ಬವಾದ ಮಕರ ಸಂಕ್ರಾಂತಿಯನ್ನು ಜಿಲ್ಲೆಯಾದ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಸುಗ್ಗಿಯ ಕಾಲದ ಹಬ್ಬವಾದ ಈ ಹಬ್ಬದಲ್ಲಿ ಅಕ್ಕಿ, ತುಪ್ಪ, ಹಾಲು, ಸಕ್ಕರೆ ಅಥವಾ ಬೆಲ್ಲಗಳಿಂದ ಮಾಡಿದ ಸಿಹಿ ಮಾಡಿ ಇದನ್ನು ಸೂರ್ಯದೇವನಿಗೆ ನೈವೇದ್ಯ ಮಾಡಿದರು. ಎಳ್ಳು, ಬೆಲ್ಲ ಸಕ್ಕರೆ ಅಚ್ಚುಗಳನ್ನು ನೆರೆಯವರಿಗೆ ಬಂಧು ಮಿತ್ರರಿಗೆ ಹಂಚಿ ಸಂಭ್ರಮಿಸಿದರು. ಮನೆ ಮನೆಗಳಲ್ಲಿ ಹೆಣ್ಣು ಮಕ್ಕಳನ್ನು ಕುಳ್ಳಿರಿಸಿ, ಆರತಿ ಮಾಡಿ, ಎಳ್ಳು ಬೆಲ್ಲ ಬೀರಲಾಯಿತು. ಮನೆಗಳ ಮುಂದೆ ಮಾವಿನಸೊಪ್ಪು, ಅನ್ನಸೊಪ್ಪು ಕಟ್ಟಲಾಗಿತ್ತು.
ಅಂಬೇಡ್ಕರ್ ಆದರ್ಶಗಳನ್ನು ಮಕ್ಕಳಿಗೆ ಬೋಧನೆ ಮೂಲಕ ತಿಳಿಸಿ

ಹನೂರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಆದರ್ಶಗಳನ್ನು ಮಕ್ಕಳಿಗೆ ಬೋಧನೆ ಮೂಲಕ ತಿಳಿಸಿ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು. ಹನೂರು ಪಟ್ಟಣದ ಗೌತಮ್ ಶಿಕ್ಷಣ ಸಂಸ್ಥೆಯು ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಬರದ ನಡುವೆಯೂ ಮಕರ ಸಂಕ್ರಾಂತಿ ಹಬ್ಬ ಆಚರಣೆಗೆ ಸಿದ್ಧತೆ
ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿ ಆಚರಣೆಗೆ ಬರದ ನಡುವೆಯೂ ಜಿಲ್ಲಾದ್ಯಂತ ಜನರು ಸಿದ್ಧತೆಯಲ್ಲಿ ತೊಡಗಿದರು. ಈ ವರ್ಷ ಎಳ್ಳು-ಬೆಲ್ಲದ ಸವಿಯ ಜತೆಗೆ ಬೇವಿನ ಕಹಿಯನ್ನೂ ತಂದಿದೆ. ಇದ್ದ ಅಲ್ಪಸ್ವಲ್ಪ ಬೆಳೆಗಳ ಒಕ್ಕಣೆ ಮುಗಿಸಿ ಸಂಕ್ರಾಂತಿಯ ಹಬ್ಬ ಆಚರಣೆಗೆ ಸಿದ್ಧರಾಗಿದ್ದಾರೆ.
ಪರ್ಮಿಟ್‌ ಇಲ್ಲದೆ ಸಂಚರಿಸಿದ ಟಿಪ್ಪರ್‌ ವಶ : ಆನ್‌ಲೈನ್‌ ನಲ್ಲೇ ೧.೭೪ ಲಕ್ಷ ದಂಡ
ಪರ್ಮಿಟ್‌ ಇಲ್ಲದೆ ಕಲ್ಲು ಸಾಗಾಣಿಕೆ ಮಾಡುತ್ತಿದ್ದ ಮೂರು ಟಿಪ್ಪರ್‌ಗಳ ಮೇಲೆ ಭಾನುವಾರ ಬೆಳಗ್ಗೆ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪದ್ಮಜ ದಾಳಿ ನಡೆಸಿದ್ದಾರೆ. ರಾಜಪ್ಪ, ಪ್ರಭಾಕರ್‌, ಸೆಲ್ವಕುಮಾರ್‌ಗೆ ಸೇರಿದ ಮೂರು ಟಿಪ್ಪರ್‌ಗಳನ್ನು ಭಾನುವಾರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪದ್ಮಜ ಹಿರೀಕಾಟಿ ಬಳಿ ತಡೆದು ತಪಾಸಣೆ ನಡೆಸಿದಾಗ ಪರ್ಮಿಟ್‌ ವಂಚಿಸಿರುವುದು ಪತ್ತೆಯಾಗಿದೆ.
16, 17 ರಂದು ಏಳು ದಂಡು ಜೋಡಿ ಮುನಿಯಪ್ಪನ ಜಾತ್ರಾ ಮಹೋತ್ಸವ
ರಾಜ್ಯದ ಗಡಿಗ್ರಾಮ ಕೂಡ್ಲೂರಿನಲ್ಲಿ ವಿಜೃಂಭಣೆಯಿಂದ ಏಳು ದಂಡು ಜೋಡಿ ಮುನಿಯಪ್ಪನ ಜಾತ್ರಾ ಮಹೋತ್ಸವ ಜ.16, 17 ರಂದು ನಡೆಯಲಿದೆ. ತಮಿಳುನಾಡಿಗೆ ಗಡಿಯಂತಿರುವ ಕೂಡ್ಲೂರು ಗ್ರಾಮದಲ್ಲಿ ಏಳು ದಂಡು ಜೋಡಿ ಮುನಿಯಪ್ಪನ ಜಾತ್ರೆ ಮಹೋತ್ಸವ 3 ವರ್ಷಗಳಿಗೊಮ್ಮೆ ನಡೆಯುತ್ತದೆ.
ಸಮಸ್ಯೆಗಳ ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ : ಶಾಸಕ ಮಂಜುನಾಥ್‌
ರೈತರು ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತನ್ನಿ ನಾನು ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ಕರೆದು ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಂ.ಆರ್ ಮಂಜುನಾಥ್ ಹೇಳಿದರು.
ದೊರೈರಾಜು ಹೆಸರಲ್ಲಿ ಪಂದ್ಯಾವಳಿ ಶ್ಲಾಘನೀಯ ವಿಚಾರ: ಶಾಸಕ ಎ. ಆರ್‌. ಕೃಷ್ಣಮೂರ್ತಿ
1994ರಲ್ಲಿ ನಾನು ಪ್ರಥಮ ಶಾಸಕರಾಗಿದ್ದ ವೇಳೆ ದಿ.ಎನ್. ದೊರೈರಾಜು ಅವರು ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಅವರ ಜೊತೆ ನನ್ನ ಒಡನಾಟ ಇತ್ತು. ಅವರ ಪುತ್ರ ಚೇತನ್ ದೊರೈರಾಜು ಅವರು ತಂದೆಯ ಸ್ಮರಣಾರ್ಥ ಕೊಳ್ಳೇಗಾಲದಲ್ಲಿ ಕಬ್ಬಡಿ ಪಂದ್ಯಾವಳಿ ಆಯೋಜನೆ ಮಾಡಿರುವುದು ಶ್ಲಾಘನೀಯ ಕಾರ್ಯ ಅವರ ರಾಜಕೀಯ ಭವಿಷ್ಯ ಉತ್ತಮವಾಗಿ ಸಾಗಲಿ ಎಂದು ಶಾಸಕ ಎ.ಆರ್. ಕೃಷ್ಣಮೂರ್ತಿ ಹೇಳಿದರು.
  • < previous
  • 1
  • ...
  • 422
  • 423
  • 424
  • 425
  • 426
  • 427
  • 428
  • 429
  • 430
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved