• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chamarajnagar

chamarajnagar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾರ್ವಜನಿಕ ಶೌಚಾಲಯಗಳಿಗೆ ನ್ಯಾಯಾಧೀಶರ ದಿಢೀರ್ ಭೇಟಿ ಪರಿಶೀಲನೆ
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಚಾಮರಾಜನಗರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಕೊಳ್ಳೇಗಾಲ ನಗರಸಭೆ ಹಾಗೂ ಹನೂರು ಪಟ್ಟಣ ಪಂಚಾಯಿತಿ ಅಧಿಕಾರಿಗಳೊಂದಿಗೆ ಇತ್ತೀಚೆಗೆ ಕೊಳ್ಳೇಗಾಲ ಹಾಗೂ ಹನೂರು ಪಟ್ಟಣದಲ್ಲಿರುವ ಸಾರ್ವಜನಿಕ, ಸಮುದಾಯ ಶೌಚಾಲಯಗಳಿಗೆ ದಿಢೀರ್ ಭೇಟಿ ನೀಡಿ ಶೌಚಾಲಯಗಳ ಸ್ವಚ್ಚತಾ ವ್ಯವಸ್ಥೆ ಹಾಗೂ ನಿರ್ವಹಣೆ ಬಗ್ಗೆ ಪರಿಶೀಲಿಸಿದರು
ಮುಳ್ಳೂರಿಗೆ ಸಮಾಜ ಸೇವಕ ಕಿರಣ್ ಭೇಟಿ, ಬಡ ಕುಟುಂಬಗಳಿಗೆ ನೆರವು
ಕೆಪಿಸಿಸಿ ಕಾರ್ಮಿಕ ವಿಭಾಗದ ಕಾರ್ಯದರ್ಶಿ, ಹಾಗೂ ಸಮಾಜ ಸೇವಕ ಜಿ.ಸಿ ಕಿರಣ್ ಶುಕ್ರವಾರ ರಾತ್ರಿ ತಾಲೂಕಿನ ಮುಳ್ಳೂರು ಗ್ರಾಮಕ್ಕೆ ಭೇಟಿ ನೀಡಿ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ಗುಂಡ್ಲುಪೇಟೆಯಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಾಸಕ, ಡೀಸಿ ಚಾಲನೆ
ಪಟ್ಟಣದ ಪುರಸಭೆ ಆಯೋಜಿಸಿದ್ದ ನಮ್ಮ ನಡೆ ಸ್ವಚ್ಛ ಗುಂಡ್ಲುಪೇಟೆ ಕಡೆ ಎಂಬ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌, ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಚಾಲನೆ ನೀಡಿದರು. ಪಟ್ಟಣದ ನೆಹರು ಪಾರ್ಕ್‌ ಆವರಣದಲ್ಲಿ ನಮ್ಮ ನಡೆ ಸ್ವಚ್ಛ ಗುಂಡ್ಲುಪೇಟೆ ಕಡೆ ಅಭಿಯಾನದ ಅಂಗವಾಗಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಹಾಗೂ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಗಿಡ ನೆಡುವ ಮೂಲಕ ಗುಂಡ್ಲುಪೇಟೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು. ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಮಾತನಾಡಿ, ಪಟ್ಟಣದ ಸ್ವಚ್ಛತೆಯಾಗಿದ್ದರೆ ಪರಿಸರ ಹಾಗೂ ಜನರ ಆರೋಗ್ಯವೂ ಚೆನ್ನಾಗಿ ಇರಲಿದೆ. ಅಶುಚಿತ್ವಕ್ಕೆ ದಾರಿ ಮಾಡಿಕೊಟ್ಟರೆ ರೋಗ, ರುಜಿನಗಳು ಬರಲಿವೆ. ಪಟ್ಟಣದ ಸ್ವಚ್ಛತೆಗೆ ನಾಗರೀಕರು ಪ್ರಥಮ ಆದ್ಯತೆ ನೀಡಬೇಕು ಎಂದರು.
ಮಾದಕ ದ್ರವ್ಯಗಳ ವಿರುದ್ಧ ಅಭಿಯಾನ ಜಾಗೃತಿ ಕಾರ್ಯಕ್ರಮಕ್ಕೆ ಎಸ್ಪಿ ಚಾಲನೆ
ಮಾದಕ ದ್ರವ್ಯಗಳ ಕುರಿತ ಜಾಗೃತಿ ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ಜಾಗೃತಿ ನಡಿಗೆ ಮತ್ತು ಓಟಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ನಗರದಲ್ಲಿ ಚಾಲನೆ ನೀಡಿದರು. ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧನಾ ಆಸ್ಪತ್ರೆಯ ಸಹಯೋಗದಲ್ಲಿ ಮಾದಕ ದ್ರವ್ಯಗಳ ಸೇವನೆ ವಿರುದ್ಧ ಅರಿವು ಮೂಡಿಸುವ ಸಲುವಾಗಿ ಏರ್ಪಡಿಸಿದ್ದ ‘ಜಾಗೃತಿ ನಡಿಗೆ ಮತ್ತು ಓಟ’ ಅಭಿಯಾನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಸಿರು ನಿಶಾನೆ ತೋರಿದರು.
ಕಳೆದ ವರ್ಷ ಗುಂಡ್ಲುಪೇಟೇಲಿ ಬರೋಬ್ಬರಿ ೫೮ ಆಕ್ಸಿಡೆಂಟ್‌ ಡೆತ್‌!
೨೦೨೩ ರ ಅವಧಿಯಲ್ಲಿ ಗುಂಡ್ಲುಪೇಟೆಯಲ್ಲಿ ೨೧೫ ರಸ್ತೆ ಅಪಘಾತದ ಪ್ರಕರಣದಲ್ಲಿ ೫೮ ಮಂದಿ ಸಾವನ್ನಪ್ಪಿದ್ದು, ೨೦೦ ಕ್ಕೂ ಹೆಚ್ಚು ಮಂದಿ ವಿವಿಧ ರೀತಿಯಲ್ಲಿ ಗಾಯಾಳುಗಳಾಗಿದ್ದಾರೆ. ಹಿಂದಿನ ವರ್ಷಗಳಿಗಿಂತ ಇದು ಹೆಚ್ಚು ಎಂದು ಪೊಲೀಸರು ಹೇಳಿದ್ದಾರೆ.
ಆಧಾರ್ ಕಾರ್ಡ್‌ ನೋಂದಣಿ ಜವಾಬ್ದಾರಿಯಿಂದ ನಿರ್ವಹಿಸಿ: ಜಿಲ್ಲಾಧಿಕಾರಿ ಶಿಲ್ಪಾನಾಗ್‌
ಜನಸಾಮಾನ್ಯರಿಗೆ ಅತ್ಯಾವಶ್ಯಕ ಗುರುತಿನ ದಾಖಲೆ ಆಧಾರ್ ಕಾರ್ಡ್‌ ನೋಂದಣಿ, ನವೀಕರಣ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗದಲ್ಲಿ ಜಿಲ್ಲಾಮಟ್ಟದ ಆಧಾರ್‌ ನೋಂದಣಿ ಸಮಿತಿ ಸಭೆಯಲ್ಲಿ ಮಾತನಾಡಿದರು.
ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ತೀರ್ಮಾನ
ಚಾಮರಾಜನಗರಜಿಲ್ಲಾಡಳಿತ ಹಾಗೂ ಎಲ್ಲ ಸಂಘ ಸಂಸ್ಥೆಗಳು, ಸಾರ್ವಜನಿಕರ ಸಹಕಾರದೊಂದಿಗೆ ಇದೇ ಜ. 26ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಗಣರಾಜ್ಯೋತ್ಸವವನ್ನು ಎಲ್ಲ ಅಗತ್ಯ ಸಿದ್ಧತೆಗಳೊಂದಿಗೆ ಅರ್ಥಪೂರ್ಣವಾಗಿ ಕೈಗೊಳ್ಳಲು ತೀರ್ಮಾನಿಸಲಾಯಿತು.
ಸಂಬಳಕ್ಕಾಗಿ ನಗರಸಭಾ ಹೊರಗುತ್ತಿಗೆ ನೌಕರರ ಪ್ರತಿಭಟನೆ
ಕಳೆದ ನಾಲ್ಕು ತಿಂಗಳಿನಿಂದ ಸಂಬಳ ನೀಡದೆ ದುಡಿಸುತ್ತಿರುವ ಚಾಮರಾಜನಗರ ನಗರಸಭೆ ವಿರುದ್ಧ ಹೊರಗುತ್ತಿಗೆ ನೌಕರರು ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರು ಮಹಾ ಸಂಘದ ಸಹಯೋಗದಲ್ಲಿ ನಗರಸಭೆಯ ಬಳಿ ಪ್ರತಿಭಟನೆ ನಡೆಸಿದರು. ನಗರಸಭಾ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ನಗರಸಭೆ ಪೌರಾಯುಕ್ತರ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸಿದರು.
ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಧರಣಿ
ಕಳೆದ ೩೧ ವರ್ಷಗಳ ಹಿಂದಿನ ರಾಮಜನ್ಮ ಭೂಮಿ ಹೋರಾಟದ ಪ್ರಕರಣದಲ್ಲಿ ಹೋರಾಟಗಾರರಾಗಿದ್ದ ಶ್ರೀಕಾಂತ ಪೂಜಾರಿಯನ್ನು ಈ ಸಂದರ್ಭದಲ್ಲಿ ಬಂಧಿಸಿರುವುದನ್ನು ಖಂಡಿಸಿ ನಗರದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಧರಣಿ ನಡೆಸಿ, ಬಿಡುಗಡೆಗೆ ಆಗ್ರಹಿಸಲಾಯಿತು.
ದಲಿತರ ಸ್ವಾಭಿಮಾನ, ಅಸ್ಮಿತೆಯ ಸಂಕೇತ ಭೀಮಾ ಕೋರೆಗಾಂವ್ : ಡಾ.ವಿಠ್ಠಲ್‌ವಗ್ಗನ್
ಭೀಮಾ ಕೋರೆಗಾಂವ್ ಯುದ್ಧ ಬ್ರಿಟಿಷ್ ಚರಿತ್ರೆಯಲ್ಲಿ ಮಹಾಸಂಗ್ರಾಮವಾಗಿದ್ದು, ದಲಿತರ ಸ್ವಾಭಿಮಾನ, ಅಸ್ಮಿತೆಯ ಸಂಕೇತ ಎಂದು ಅಂಬೇಡ್ಕರ್ ವಿಚಾರವಾದಿ ಡಾ.ವಿಠ್ಠಲ್‌ ವಗ್ಗನ್ ಹೇಳಿದರು.
  • < previous
  • 1
  • ...
  • 427
  • 428
  • 429
  • 430
  • 431
  • 432
  • 433
  • 434
  • 435
  • ...
  • 439
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved