ಸಾರಾಂಶ
ಮೂಲ್ಕಿ: ತುಳುನಾಡಿನ ಸಾಹಿತ್ಯ, ಸಂಸ್ಕೃತಿ ಗಳ ಬಗ್ಗೆ ವಿದ್ಯಾರ್ಥಿ ಸಮುದಾಯಕ್ಕೆ ತಲುಪಿಸುವ ನಿಟ್ಟಿನಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವಿವಿಧ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುತ್ತಿದೆ. ತುಳು ಭಾಷೆಯನ್ನು ರಾಜ್ಯದ ದ್ವಿತೀಯ ಅಧಿಕೃತ ಭಾಷೆ ಯನ್ನಾಗಿಸುವ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರ ವೇ ಅನುಷ್ಠಾನಗೊಳ್ಳುವ ಸಾಧ್ಯತೆ ಗಳಿವೆಯೆಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಹೇಳಿದ್ದಾರೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಸಿಂಗಾರ ಸುರತ್ಕಲ್ ಮತ್ತು ಚೇಳೈರು ಸರ್ಕಾರಿ ಪದವಿ ಪೂರ್ವ ಕಾಲೇಜುನ ಸಹಭಾಗಿತ್ವದಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮೂರು ದಿನಗಳ ಕಾಲ ನಡೆಯಲಿರು ರಂಗ ಕಾರ್ಯಾಗಾರ ‘ನಲ್ಮೆ ಬಲ್ಮೆ’ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಚಲನಚಿತ್ರ ಹಾಗೂ ರಂಗ ಕಲಾವಿದೆ ಗೀತಾ ಸುರತ್ಕಲ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರಂಗಭೂಮಿ ಆತ್ಮ ವಿಶ್ವಾಸ ಮತ್ತು ಮಾನವೀಯ ಮೌಲ್ಯ ತಿಳಿಸಿ ಕೊಡುತ್ತದೆಯೆಂದು ಹೇಳಿದರು.
ಚೇಳೈರು ಗ್ರಾಮ ಪಂಚಾಯಿತಿ ಅಧ್ಯಕ್ಷ ಜಯಾನಂದ ಶುಭ ಹಾರೈಸಿದರು. ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಗಡೆ ಮಾತನಾಡಿ, ತುಳುನಾಡಿನ ಇತಿ ಹಾಸ ಸಾಹಿತ್ಯ ದ ಓದಿನ ಮೂಲಕ ವಿದ್ಯಾರ್ಥಿಗಳು ಪ್ರಬುದ್ಧರಾಗ ಬೇಕೆಂದು ಹೇಳಿದರು.ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ವೆಂಕಟೇಶ್ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪುಷ್ಪರಾಜ್ ಶೆಟ್ಟಿ ಮಧ್ಯ, ಸಿಂಗಾರ ಸುರತ್ಕಲ್ ಕಾರ್ಯದರ್ಶಿ ಕೃಷ್ಣ ಮೂರ್ತಿ, ಹಿರಿಯ ರಂಗ ನಿರ್ದೇಶಕ ಜಗನ್ ಪವಾರ್ ಬೇಕಲ್, ಕನ್ನಡ ಸಾಹಿತ್ಯ ಪರಿಷತ್ ಸುರತ್ಕಲ್ ಹೋಬಳಿ ಘಟಕದ ಅಧ್ಯಕ್ಷೆ ಗುಣವತಿ ರಮೇಶ್, ಉಪನ್ಯಾಸಕಿ ಯರಾದ ಶೋಭಾ ಶರ್ಮಾ, ಜಯಶ್ರೀ, ತ್ರಿವೇಣಿ, ವಿದ್ಯಾರ್ಥಿ ಸಾಂಸ್ಕೃತಿಕ ಕಾರ್ಯದರ್ಶಿ ರಕ್ಷಿತ್, ವಿದ್ಯಾರ್ಥಿ ನಾಯಕ ರಾದ ಚಂದನ್ ಮತ್ತು ಅಕ್ಷತಾ ಉಪಸ್ಥಿತರಿದ್ದರು.
ಪ್ರಾಂಶುಪಾಲೆ ಡಾ. ಜ್ಯೋತಿ ಚೇಳೈರು ಸ್ವಾಗತಿಸಿದರು. ಉಪನ್ಯಾಸಕಿ ಜಯಶ್ರೀ ಜಿ. ವಂದಿಸಿದರು. ಉಪನ್ಯಾಸಕ ಚಂದ್ರನಾಥ್. ಎಂ. ನಿರೂಪಿಸಿದರು.