ಸಾರಾಂಶ
ಚೆಯ್ಯಂಡಾಣೆ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಉಪಟಳಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇಲ್ಲಿ ಆಗಾಗ್ಗೆ ಕಾಡಾನೆಗಳು ದಾಂದಲೆ ನಡೆಸಿ ಫಸಲನ್ನು ತುಳಿದು ತಿಂದು ನಷ್ಟ ಉಂಟು ಮಾಡುತ್ತಿವೆ. ನಿರಂತರ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಗ್ರಾಮಸ್ಥರು 10ರಂದು ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಚೆಯ್ಯಂಡಾಣೆ ನರಿಯಂಡಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಕಾಡಾನೆಗಳು ಉಪಟಳಕ್ಕೆ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಇಲ್ಲಿ ಆಗಾಗ್ಗೆ ಕಾಡಾನೆಗಳು ದಾಂದಲೆ ನಡೆಸಿ ಫಸಲನ್ನು ತುಳಿದು ತಿಂದು ನಷ್ಟ ಉಂಟು ಮಾಡುತ್ತಿವೆ. ನಿರಂತರ ಉಪಟಳದಿಂದ ಬೇಸತ್ತ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ.ಚೆಯ್ಯಂಡಾಣೆ ನರಿಯಂದಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಚೆಯ್ಯಂಡಾಣೆ, ನರಿಯಂದಡ, ಚೇಲಾವರ,ಕೋಕೇರಿ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ನಿರಂತರವಾಗಿದ್ದು ಕೃಷಿಕರ ಪಸಲು ನಷ್ಟವಾಗುತ್ತಿವೆ. ಗ್ರಾಮದ ಪೊಕ್ಕೋಳಂಡ್ರ , ಕೋಡಿಮಣಿಯoಡ, ಬೊವೇರಿಯಂಡ, ಬಿಳಿಯಂಡ್ರ, ಮಕ್ಕಿಮನೆ, ಮಂಜoಡ್ರ, ನೆಲ್ಲಮಕ್ಕಳ, ಮುಂಡ್ಯೋಲಂಡ ಅವರ ತೋಟದಲ್ಲಿ ಕಾಡಾನೆಗಳ ಹಿಂಡು ಕೃಷಿ ಪಸಲುಗಿಡಗಳನ್ನು ತಿಂದು ಧ್ವಂಸಗೊಳಿಸಿವೆ. ತೋಟದಲ್ಲಿ ಬೆಳೆಸಲಾದ ಅಡಕೆ, ಕಾಫಿ, ಬಾಳೆ ಗಿಡಗಳನ್ನು ನಾಶಪಡಿಸಿವೆ. ಇಲ್ಲಿನ ಸುಮಾರು 2 ಎಕರೆ ಕೃಷಿ ಪ್ರದೇಶದಲ್ಲಿ ನಷ್ಟ ಉಂಟಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಕಾಡಾನೆಗಳ ಹಿಂಡು ಈ ಭಾಗದಲ್ಲಿಯೇ ತೋಟಗಳಲ್ಲಿ ಬೀಡು ಬಿಟ್ಟಿದ್ದು ಬಹುತೇಕ ತೋಟಗಳಲ್ಲಿ ದಾಳಿ ನಡೆಸುವ ಮೂಲಕ ಕೃಷಿ ಪಸಲುಗಳನ್ನು ಧ್ವಂಸಗೊಳಿಸುತ್ತಿವೆ. ಅರಣ್ಯ ಇಲಾಖೆಯ ಸಿಬ್ಬಂದಿ ಕಾಡಾನೆಗಳನ್ನು ಕಾಡಿಗಟ್ಟುವ ಕಾರ್ಯಚರಣೆ ಮಾಡಲು ಮುಂದಾಗಿದ್ದು ಕಾಡಾನೆಗಳು ಸಿಬ್ಬಂದಿ ಕಣ್ಣಿಗೆ ಮಣ್ಣೆರಚ್ಚುತ್ತಿವೆ. ಪದೇ ಪದೇ ದಾಳಿ ಮಾಡಿ ತೊಂದರೆ ನಡೆಸುತ್ತಿವೆ ಎಂದು ನರಿಯಂದಡ ಗ್ರಾಮಸ್ಥ ಪೊಕ್ಕೋಳಂಡ್ರ ಧನೋಜ್ ಅಳಲು ತೋಡಿಕೊಂಡಿದ್ದಾರೆ.ಈ ಬಗ್ಗೆ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಡಾನೆಗಳನ್ನು ಕಾಡಿಗೆ ಅಟ್ಟುವುದರೊಂದಿಗೆ ಶಾಶ್ವತ ಪರಿಹಾರಕ್ಕೆ ಚಿಂತನೆ ನಡೆಸುವಂತಹ ಆಗಬೇಕು. ಬೇಸತ್ತು ಗ್ರಾಮಸ್ಥರು 10ರಂದು ಚೆಯ್ಯಂಡಾಣೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಹೇಳಿದ್ದಾರೆ.
ಬೆಳೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಡಿಎಫ್ ಒ ಜಗನ್ನಾಥ್ ಕಾಡಾನೆಗಳ ದಾಂದಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಪ್ರತಿಭಟನೆ ಕೈ ಬಿಟ್ಟು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.