ವಾಯುಭಾರ ಕುಸಿತ: ಚಿಕ್ಕಬಳ್ಳಾಪುರದಲ್ಲಿ ಜಿಟಿಜಿಟಿ ಮಳೆಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಡಿಮಳೆಗೆ ವಾಹನ ಸವಾರರು ಸುಸ್ತಾಗಿ ಹೋಗಿದ್ದಾರೆ. ಶಾಲಾ-ಕಾಲೇಜು ಮತ್ತು ಕಚೇರಿಗಳಿಗೆ ತೆರಳುವ ಮಂದಿಗೂ ಮಳೆರಾಯ ಶಾಕ್ ಕೊಟ್ಟಿದ್ದಾನೆ. ಜೋರು ಚಳಿಗೆ, ಮಳೆಗೆ ಜಿಲ್ಲೆಯ ಜನತೆ ಸುಸ್ತಾಗಿ ಹೋಗಿದ್ದಾರೆ. ಜಿಲ್ಲೆಯ ಪ್ರವಾಸಿ ತಾಣಗಳಾದ ನಂದಿಗಿರಿಧಾಮ, ಈಶಾ ಕೇಂದ್ರ, ಸೇರಿದಂತೆ ಎಲ್ಲಡೆ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ.