ಪತಿಯ ಕಿರುಕುಳ ತಾಳಲಾರದೆ ಗೃಹಿಣಿ ನೇಣಿಗೆ ಶರಣು ಮೃತ ಶೋಭಾಳು ಅಮೃತಾ, ಅನಿತಾ ಮತ್ತು ಮನೋಜ್ ಎಂಬ ಮೂವರು ಮಕ್ಕಳನ್ನು ಅಗಲಿದ್ದಾರೆ. ಘಟನೆಯ ನಂತರ ಪುತ್ರಿ ಅಮೃತಾ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕಾಗಮಿಸಿದ ನಗರ ಠಾಣಾ ಪಿಎಸ್ಐ ಎಚ್.ನಂಜುಂಡಯ್ಯ ಸ್ಥಳ ಮಹಜರು ನಡೆಸಿ, ಮೃತಳ ಶವವನ್ನು ಮರಣೋತ್ತರ ಪರೀಕ್ಷೆಗೆ ಜಿಲ್ಲಾಸ್ಪತ್ರೆಗೆ ಸಾಗಿಸಿದ್ದು, ಪತಿ ಸೀನಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.