ಚಿಕ್ಕಮಗಳೂರು, ಮಕ್ಕಳು ಭವಿಷ್ಯದಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕೆಂಬ ಆಸೆಯಿಂದ ಪಾಲಕರು ಬಾಲ್ಯದಿಂದಲೇ ಆಂಗ್ಲ ಭಾಷೆ ವ್ಯಾಮೋಹ ಬಿತ್ತುವ ಮುಖಾಂತರ ಕನ್ನಡ ಭಾಷೆ ನಶಿಸುವಂತೆ ಮಾಡುತ್ತಿರುವುದು ದುರ್ಧೈವ ಎಂದು ಲೇಖಕಿ ಡಾ. ಸಬಿತಾ ಬನ್ನಾಡಿ ವಿಷಾದ ವ್ಯಕ್ತಪಡಿಸಿದರು.
ತರೀಕೆರೆ, ನಾಡಿನ ಮಕ್ಕಳಲ್ಲಿ ಕಾಡು ಹಾಗೂ ಕಾಡಿನ ಅವಶ್ಯಕತೆ ಬಗ್ಗೆ ಅರಿವು ಮೂಡಿಸುವುದು ಇಂದಿನ ದಿನಗಳಲ್ಲಿ ಅಗತ್ಯವಾಗಿದೆ ಎಂದು ಜಿ.ಎಚ್. ಶ್ರೀನಿವಾಸ್ ಜನಹಿತ ಸೇವಾ ಟ್ರಸ್ಟ್ ಅಧ್ಯಕ್ಷೆ ವಾಣಿ ಶ್ರೀನಿವಾಸ್ ಅಭಿಪ್ರಾಯಪಟ್ಟರು.
ಚಿಕ್ಕಮಗಳೂರು, ಕನ್ನಡ ಭಾಷಾ ಸಂಸ್ಕೃತಿಗೆ ಧಕ್ಕೆಯುಂಟಾದರೆ ಪಕ್ಷ, ಜಾತಿ ಮತ್ತು ಧರ್ಮ ಬೇಧ ಮರೆತು ಕನ್ನಡಿಗರು ಒಂದಾಗಬೇಕು. ನಾಡಿನ ಸಂಸ್ಕೃತಿ, ಭಾಷಾ ಸೊಗಡನ್ನು ಎತ್ತಿ ಹಿಡಿಯುವ ಕಾರ್ಯ ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಕರೆ ನೀಡಿದರು.
ಶೃಂಗೇರಿ, ಶಿಕ್ಷಣ ಬದುಕಿಗೆ ಪೂರಕವಾಗಿರಬೇಕು. ಶಿಕ್ಷಣ, ಸಂಸ್ಕಾರ ಬಹಳ ಮುಖ್ಯ. ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಮೌಲ್ಯಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಶೃಂಗೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಭಾರತಿ ಹೇಳಿದರು.
ಬೀರೂರು, ಕನ್ನಡ ಭಾಷೆ ಮೇಲಿನ ಪ್ರೇಮ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ನಿರಂತರವಾಗಿದ್ದರೆ ಭಾಷೆ ತನ್ನ ಮಹತ್ವ ಉಳಿಸಿಕೊಳ್ಳುತ್ತದೆ ಎಂದು ಶಾಂತಾ ಬೀರೂರು ತಿಳಿಸಿದರು.
ಚಿಕ್ಕಮಗಳೂರುಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸೋಲು ಗೆಲುವು ಸರ್ವೆ ಸಾಮಾನ್ಯ. ವಿದ್ಯಾರ್ಥಿಗಳು ಧೃತಿಗೆಡದೇ ಆತ್ಮವಿಶ್ವಾಸದಿಂದ ಮುಂದೆ ಸಾಗಬೇಕು. ಮುಂದಿನ ಪ್ರಯತ್ನಕ್ಕೆ ಕಟಿಬದ್ಧರಾಗಬೇಕು ಎಂದು ಆದಿಚುಂಚನಗಿರಿ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಿ.ಕೆ.ಸುಬ್ಬರಾಯ ಹೇಳಿದರು.
ನರಸಿಂಹರಾಜಪುರಮಕ್ಕಳ ಶಿಕ್ಷಣದ ಜೊತೆಗೆ ಸಂಸ್ಕಾರವೂ ಕಲಿಸಬೇಕಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ತಿಳಿಸಿದರು.ಬುಧವಾರ ಹಳ್ಳಿಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಂಕದಕುಣಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಯಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ, ಕಳೆದ 23 ವರ್ಷದಿಂದಲೂ ಪ್ರತಿಭಾ ಕಾರಂಜಿ ನಡೆಯುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಪ್ರತಿಭಾವಂತ ಮಕ್ಕಳು ಉತ್ತಮ ಶಿಕ್ಷಕರಿದ್ದಾರೆ. ಮಗು ಪರಿಪೂರ್ಣವಾಗಲು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ ಯೂ ಅಗತ್ಯ. ಮಾಜಿ ಶಿಕ್ಷಣ ಸಚಿವ ಎಚ್.ಜಿ.ಗೋವಿಂದೇಗೌಡರು ಈ ಭಾಗದವರು. ಶಿಕ್ಷಣ ಇಲಾಖೆಯಲ್ಲಿ ಅವರ ಪ್ರಾಮಾಣಿಕ ಸೇವೆಯಿಂದ ಲಕ್ಷಾಂತರ ಜನರಿಗೆ ಶಿಕ್ಷಕ ವೃತ್ತಿ ಸಿಕ್ಕಿದೆ. ಗ್ರಾಮೀಣ ಭಾಗದಲ್ಲಿ ಸರ್ಕಾರಿ ಶಾಲೆ ಉಳಿಯಲು ಶಿಕ್ಷಕರೊಂದಿಗೆ ಪೋಷಕರು ಕೈಜೋಡಿಸಬೇಕು ಎಂದು ಕರೆ ನೀಡಿದರು.
ತರೀಕೆರೆಚಿಕ್ಕಮಗಳೂರು ಸಿಡಿಸಿಸಿ ಬ್ಯಾಂಕ್ ಯಾವುದೇ ತಾರತಮ್ಯ ಮಾಡದೆ ರೈತರಿಗೆ ಸಾಲಸೌಲಭ್ಯ ನೀಡುತ್ತಿದ್ದು, ಅತ್ಯಂತ ಪ್ರಾಮಾಣಿಕತೆಯಿಂದ ಸೇವೆ ಒದಗಿಸುತ್ತಿದೆ ಎಂದು ಮಾಜಿ ಶಾಸಕ, ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ತಿಳಿಸಿದರು.
ನರಸಿಂಹರಾಜಪುರತಂತ್ರಜ್ಞಾನ ಎಷ್ಟೇ ಮುಂದುವರಿದರೂ ಕೃತಕವಾಗಿ ರಕ್ತ ಉತ್ಪಾದನೆ ಮಾಡಲು ಸಾಧ್ಯವಿಲ್ಲ ಎಂದು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ರಕ್ತನಿಧಿ ಕೇಂದ್ರದ ಆಪ್ತ ಸಮಾಲೋಚಕ ಹನುಮಂತಪ್ಪ ತಿಳಿಸಿದರು.
ಅಜ್ಜಂಪುರ: ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷ ಎಂ. ಜೆ.ಕುಮಾರ್ ನೇತೃತ್ವದಲ್ಲಿ ನಡೆದು ವಾರ್ಷಿಕ ವರದಿ, ಅಂಕಿ ಅಂಶಗಳ ಪ್ರಗತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಯಿತು.
chikkamagaluru