ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರವಿರಲು ನ್ಯಾ.ವಿ.ಉರ್ಮಿಳಾ ಕರೆತರೀಕೆರೆ, ಮಾದಕ ವಸ್ತುಗಳಿಂದ ವಿದ್ಯಾರ್ಥಿಗಳು ದೂರವಿರಬೇಕು ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿ.ಊರ್ಮಿಳಾ ಹೇಳಿದ್ದಾರೆ.ತರೀಕೆರೆ ತಾಲೂಕು ಕಾನೂನು ನೆರವು ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ, ಜಯಪ್ರಕಾಶ್ ನಾರಾಯಣ ಪ್ರೌಢಶಾಲೆ ಬೆಟ್ಟದಹಳ್ಳಿ ಸಂಯುಕ್ತ ಆಶ್ರಯದಲ್ಲಿ ಶಾಲೆಯಲ್ಲಿ ನಡೆದ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.