ವಿದ್ಯಾರ್ಥಿಗಳು ಇಚ್ಚಾಶಕ್ತಿ, ಕ್ರಿಯಾಶಕ್ತಿ ಬೆಳೆಸಿಕೊಳ್ಳಬೇಕು: ವಿಧುಶೇಖರ ಶ್ರೀಶೃಂಗೇರಿ, ವಿದ್ಯಾರ್ಥಿಗಳು ಎಳೆಯ ವಯಸ್ಸಿನಿಂದಲೇ ಇಚ್ಚಾಶಕ್ತಿ, ಕತೃತ್ವಶಕ್ತಿಯನ್ನು ಮೈಗೂಡಿಸಿಕೊಳ್ಳಬೇಕು. ಉತ್ತಮ ಸಾಧನೆ ಮಾಡಲು ಕೇವಲ ಇಚ್ಚಾಶಕ್ತಿಯೊಂದೇ ಇದ್ದರೆ ಸಾಲದು. ಅದನ್ನು ಸಾಧಿಸಲು ಬೇಕಾದ ಜ್ಞಾನ, ಕ್ರಿಯಾಶಕ್ತಿ ಬೆಳೆಸಿಕೊಳ್ಳಬೇಕು ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ತೀರ್ಥರು ಹೇಳಿದರು.