ಅಂಗನವಾಡಿಗಳಿಂದಲೇ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಚಿಂತನೆ: ಲಕ್ಷ್ಮೀ ಹೆಬ್ಬಾಳ್ಕರ್ಚಿಕ್ಕಮಗಳೂರು,ಅಂಗನವಾಡಿ ಕೇಂದ್ರಗಳಲ್ಲಿ ಮಾಂಟೆಸ್ಸರಿ, ನರ್ಸರಿ, ಎಲ್.ಕೆ.ಜಿ., ಯುಕೆಜಿ ಮಾದರಿ ತರಗತಿಗಳನ್ನು ಈ ವರ್ಷದಿಂದ ತೆರೆದು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಯೋಜನೆಯನ್ನು ಸರ್ಕಾರದಿಂದ ರೂಪಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್.ಹೆಬ್ಬಾಳ್ಕರ್ ಹೇಳಿದರು.