ಇಡಿ ದಾಳಿ ಸ್ವಾಗತಿಸುತ್ತೇನೆ: ಸಿ.ಟಿ. ರವಿಚಿಕ್ಕಮಗಳೂರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ದಾಳಿ ನಡೆಸಿರುವುದನ್ನು ಸ್ವಾಗತಿಸುತ್ತೇನೆ. ಜೊತೆಗೆ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಬಳಕೆಯಾಗಬೇಕಾದ ಹಣ ಚುನಾವಣೆ ಅಕ್ರಮಕ್ಕೆ ಬಳಕೆಯಾಗಿರುವುದು ದರೋಡೆಗಿಂತ ಕ್ರೂರವಾಗಿದೆ. ವ್ಯವಸ್ಥೆಯೊಳಗಿರುವವರೇ ಸೇರಿಕೊಂಡು ಮಾಡಿಸಿರುವ ದರೋಡೆ ಇದು. ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು.