ಜಿಲ್ಲೆಯಲ್ಲಿ ಉತ್ತಮ ಆರಂಭ ನೀಡಿದ ಪೂರ್ವ ಮುಂಗಾರು: ಕೃಷಿ ಚಟುವಟಿಕೆಗೆ ಸಿದ್ಧತೆಚಿಕ್ಕಮಗಳೂರು, ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದ್ದು, ಪೂರ್ವ ಮುಂಗಾರು ಕೃಷಿಗೆ ಭೂಮಿ ಸಿದ್ಧತೆ ಚಟುವಟಿಕೆ ಚುರುಕುಗೊಂಡಿದೆ. ಅಶ್ವಿನಿ ಮಳೆ ನಕ್ಷತ್ರದಿಂದ ಉತ್ತಮ ಆರಂಭ ಪಡೆದ ಮಳೆ ಇದುವರೆಗೆ 94 ಮಿ.ಮೀ.ನಷ್ಟು (ಶೇ.68 ರಷ್ಟು ಹೆಚ್ಚು) ಬಂದಿದ್ದು, ಕೃಷಿ ಯೋಗ್ಯ ವಾತಾವರಣ ಕಲ್ಪಿಸಿಕೊಟ್ಟಿದೆ ಎಂದು ಜಂಟಿ ಕೃಷಿ ನಿರ್ದೇಶಕಿ ಸುಜಾತಾ ತಿಳಿಸಿದ್ದಾರೆ.