ಬೆಳೆಗಾರರ ತೋಟದಿಂದ ಉತ್ತಮ ತಳಿ ಆಯ್ಕೆ: ಕೆ.ಪಿ.ಶ್ರೀಹರ್ಷಬಾಳೆಹೊನ್ನೂರು, ಅತಿ ಹೆಚ್ಚು, ಅತಿ ಕಡಿಮೆ ಮಳೆ ಬೀಳುವ ಬೆಳೆಗಾರರ ತೋಟದಲ್ಲಿ ಪ್ರತಿ ವರ್ಷ ಉತ್ತಮ ಫಸಲು ನೀಡುವ, ರೋಗ ನಿರೋಧಕ ಗುಣ ಹೊಂದಿದ ಯಾವುದಾದರೂ ಗಿಡಗಳಿದ್ದಲ್ಲಿ ಕಾಫಿ ಸಂಶೋಧನಾ ಕೇಂದ್ರಕ್ಕೆ ಮಾಹಿತಿ ನೀಡಿ ನೋಂದಣಿ ಮಾಡಿಕೊಂಡಲ್ಲಿ ಆ ತಳಿ ಕುರಿತು ಹೆಚ್ಚಿನ ಸಂಶೋಧನೆ ನಡೆಸಿ ಹೊಸ ತಳಿ ಬಿಡುಗಡೆಗೆ ಪ್ರಯತ್ನಿಸಲಾಗುವುದು ಎಂದು ಸಿಆರ್ಎಸ್ನ ಕೇಂದ್ರೀಯ ಕಾಫಿ ಸಂಶೋಧನಾ ಕೇಂದ್ರದ ಸಸ್ಯಶಾಸ್ತ್ರ ವಿಭಾಗದ ವಿಜ್ಞಾನಿ ಕೆ.ಪಿ.ಶ್ರೀಹರ್ಷ ಹೇಳಿದರು.