• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನದಲ್ಲಿ ನೆನಪು ಉಳಿಯಲು ಸಾಧನೆ ಮುಖ್ಯ ಜಯಶ್ರೀ ಜೋಷಿ
ನಮ್ಮ ಜೀವನದಲ್ಲಿ ನಾವು ಮಾಡಿದ ಸಾಧನೆ ಆಧರಿಸಿ ನೆನಪುಗಳು ಮಾತ್ರ ಉಳಿಯುತ್ತವೆ ಎಂದು ಮಲೆನಾಡು ವಿದ್ಯಾಸಂಸ್ಥೆ ನಿರ್ದೇಶಕಿ ಜಯಶ್ರೀ ಜೋಷಿ ಹೇಳಿದರು. ನಗರದ ಎಂಇಎಸ್ ಕಾಲೇಜು ಸಭಾಂಗಣದಲ್ಲಿ ಪೂರ್ವಿ ಸುಗಮ ಸಂಗೀತ ಅಕಾಡೆಮಿ ಟ್ರಸ್ಟ್, ಯುರೇಕಾ ಅಕಾಡೆಮಿ, ಲಯನ್ಸ್ ಸಂಸ್ಥೆ ಹಾಗೂ ಮಲೆನಾಡು ವಿದ್ಯಾಸಂಸ್ಥೆ ಸಹಯೋಗದಲ್ಲಿ ಪೂರ್ವಿ ಗಾನಯಾನ-95 ಸರಣಿಯಲ್ಲಿ ಹಿರಿಯ ಖ್ಯಾತ ನಟಿ ಡಾ.ಲೀಲಾವತಿ ಅಭಿನಯದ ಚಲನಚಿತ್ರ ಗೀತೆಗಳ ವಿಶೇಷ ಮೆಲ್ಲುಸಿರೇ ಸವಿಗಾನ ಗಾನ ಶ್ರದ್ಧಾಂಜಲಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯಲ್ಲಿ 246 ಡೆಂಘೀ ಪ್ರಕರಣ ಪತ್ತೆ ಡಾ.ಅಶ್ವಥ್‌ಬಾಬು
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ವರ್ಷ 246 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ನಿಯಂತ್ರಣಕ್ಕೆ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವಥ್ ಬಾಬು ಹೇಳಿದ್ದಾರೆ.
ಬಿಡಾಡಿ ಜಾನುವಾರುಗಳಿಗೆ ರಿಫ್ಲೆಕ್ಟಿವ್ ಕಾಲರ್‌ ಬೆಲ್ಟ್‌ ಅಳವಡಿಕೆ ಜಿಪಂ ಸಿಇಓ ಮಾಹಿತಿ
ನೀಲಕಂಠ ಮತ್ತು ಸ್ನೇಹಿತರ ತಂಡದ ನೆರವಿನಲ್ಲಿ ಜಿಲ್ಲೆಯ 500 ಬಿಡಾಡಿ ದನಗಳಿಗೆ ಬೆಲ್ಟ್‌ ಅಳವಡಿಕೆ, ರಸ್ತೆ ಅಪಘಾತ ನಿಯಂತ್ರಿಸಲು ಬಿಡಾಡಿ ದನಗಳಿಗೆ ರಿಫ್ಲೆಕ್ಟಿವ್ ಕಾಲರ್ ಬೆಲ್ಟ್ ಅಳವಡಿಸುವ ವಿನೂತನ ವಿಧಾನವೊಂದನ್ನು ಕಂಡುಕೊಳ್ಳಲಾಗಿದೆ.
ಮಹಿಳೆಯರ ಸ್ವಾಲಂಬಿ ಬದುಕಿಗೆ ಧರ್ಮಸ್ಥಳ ಯೋಜನೆ ಶಕ್ತಿ: ಶಾಸಕ ಆನಂದ್
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯು ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಲು, ಅವರಿಗೆ ಶಕ್ತಿ ತುಂಬುತ್ತಿದೆ ಎಂದು ಶಾಸಕ ಕೆ ಎಸ್ ಆನಂದ್ ಹೇಳಿದರು. ಕಡೂರು ಸಮೀಪ ಮಲ್ಲೇಶ್ವರದ ಶ್ರೀ ಬೆಂಕಿ ಲಕ್ಷ್ಮಯ್ಯ ಕಲ್ಯಾಣ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಯೋಜಿಸಿದ್ದ ಮಹಿಳಾ ವಿಕಾಸ ಕಾರ್ಯಕ್ರಮದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.
ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಮಹಿಳೆ ಸಾವು
ಕಾಫಿ ತೋಟದ ಕೆಲಸಕ್ಕೆ ಹೋಗುತ್ತಿದ್ದ ಕಾರ್ಮಿಕರ ಮೇಲೆ ಬುಧವಾರ ಕಾಡಾನೆ ದಾಳಿ ನಡೆಸಿದ್ದು, ಗಾಳಿಗುಂಡಿ ಗ್ರಾಮದ ಮೋಹನ್ ಅವರ ಪುತ್ರಿ ಮೀನಾ (29) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಲ್ದೂರು ಸಮೀಪದ ಗಾಳಿಗುಂಡಿ ಗ್ರಾಮದಿಂದ ಹೆಡದಾಳು ಗುಡ್ಡದಕೆರೆ ಬಳಿಯ ಕಾಫಿ ತೋಟದ ಕೆಲಸಕ್ಕೆ ಬುಧವಾರ ಬೆಳಗ್ಗೆಯೇ ಆರು ಮಂದಿ ಹೋಗಿದ್ದರು. ಮನೆಯಿಂದ ತೆಗೆದುಕೊಂಡು ಹೋಗಿದ್ದ ಉಪಾಹಾರವನ್ನು ಕೆಲಸ ಆರಂಭಿಸುವ ಮೊದಲೆ ತಿನ್ನಲು ಒಟ್ಟಿಗೆ ನಾಲ್ವರು ಯುವತಿಯರು ಕುಳಿತಿದ್ದರು. ಈ ಸಂದರ್ಭದಲ್ಲಿ ಬಂದ ಆನೆಯನ್ನು ನೋಡಿದ ಎಲ್ಲರೂ ಓಡಿದರು. ಆದರೆ, ಮೀನಾ ಅವರು ತಪ್ಪಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಮೀನಾ ಅವರ ತಲೆಯ ಮೇಲೆ ಆನೆ ಕಾಲಿಟ್ಟಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹ ನೋಡಿದ ಮತ್ತೊಬ್ಬ ಮಹಿಳೆ ಚಂದ್ರಿ (52) ಆಘಾತಕ್ಕೆ ಒಳಗಾಗಿ ಕುಸಿದು ಬಿದ್ದಿದ್ದು, ಅವರನ್ನು ಆಲ್ದೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರೊ. ಭಗವಾನ್ ಚಿಕ್ಕಮಗಳೂರು ಆಗಮನಕ್ಕೆ ಒಕ್ಕಲಿಗರ ವಿರೋಧ
ನಿವೃತ್ತ ಪ್ರಾಧ್ಯಾಪಕ, ಹಿರಿಯ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಅವರು 20 ರಂದು ಚಿಕ್ಕಮಗಳೂರಿನಲ್ಲಿ ಏರ್ಪಡಿಸಲಾಗಿರುವ ಮಹಿಷ ದಸರಾ ಉತ್ಸವಕ್ಕೆ ಆಗಮಿಸುತ್ತಿದ್ದು, ಇದಕ್ಕೆ ಜಿಲ್ಲೆಯ ಒಕ್ಕಲಿಗ ಸಮುದಾಯ ವಿರೋಧ ವ್ಯಕ್ತಪಡಿಸುತ್ತಿದೆ. ಒಕ್ಕಲಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರೊ. ಕೆ.ಎಸ್. ಭಗವಾನ್ ಅವರು ಚಿಕ್ಕಮಗಳೂರು ಜಿಲ್ಲೆಗೆ ಆಗಮಿಸದಂತೆ ನಿರ್ಬಂಧ ಹೇರಬೇಕೆಂದು ಆಗ್ರಹಿಸಿ ಆಲ್ದೂರಿನಲ್ಲಿ ಒಕ್ಕಲಿಗ ಸಮುದಾಯದವರು ಮಂಗಳವಾರ ಪ್ರತಿಭಟನೆ ನಡೆಸಿದರು.
ಅಪ್ರಾಪ್ತೆಯೊಂದಿಗೆ ಅಸಭ್ಯ ವರ್ತನೆಃ ಚಿನ್ನದಂಗಡಿ ಮಾಲಿಕನಿಗೆ ಹಿಗ್ಗಾಮುಗ್ಗ ಥಳಿತ
ತರೀಕೆರೆ: ಅಸಭ್ಯ ವರ್ತನೆ ತೋರಿದ ಪಟ್ಟಣದ ಚಿನ್ನದ ಅಂಗಡಿ ಮಾಲೀಕನಿಗೆ ಸಾರ್ವಜನಿಕರು ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ನಡೆದಿದೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ
ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಭ್ರಷ್ಟಾಚಾರ ತುಂಬಿ ತುಳುಕುತ್ತಿದ್ದು, ಗುತ್ತಿಗೆದಾರನ ಮನೆಯೊಂದರಲ್ಲಿ ಸಿಕ್ಕಿದ 40 ಕೋಟಿ ರುಪಾಯಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಅರುಣಕುಮಾರ್ ಆಗ್ರಹಿಸಿದರು.ಅವರು ಮಂಗಳವಾರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಬಿಜೆಪಿಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಗುತ್ತಿಗೆದಾರರ ಸಂಘದ ಉಪಾಧ್ಯಕ್ಷನ ಮನೆಯಲ್ಲಿ ಕೋಟಿಗಟ್ಟಲೆ ಹಣ ದೊರೆತಿದೆ. ಈ ಮಾರ್ಗವಾಗಿ ಕಾಂಗ್ರೆಸ್ ಪಂಚ ರಾಜ್ಯಗಳ ಚುನಾವಣೆಗೆ ಹಣ ವರ್ಗಾವಣೆ ಮಾಡುವ ದಂಧೆ ಮಾಡುತ್ತಿರುವುದು ಸಾಬೀತಾಗಿದೆ. ಜನರಿಗೆ ಬಿಟ್ಟಿ ಭಾಗ್ಯಗಳ ಆಮಿಷವೊಡ್ಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯ ದಿವಾಳಿ ಆಗುವ ದಿನಗಳು ದೂರವಿಲ್ಲ ಎಂದು ಭವಿಷ್ಯ ನುಡಿದರು.
ಲಕ್ಷಾಂತರ ರು. ಮೌಲ್ಯದ ಸಾಗವಾನಿ ಮರ ಕಡಿತಲೆ
ಬಾಳೆಹೊನ್ನೂರು ವಲಯ ಅರಣ್ಯ ವ್ಯಾಪ್ತಿಯ ದೇವದಾನ ಮೀಸಲು ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರು. ಬೆಲೆ ಬಾಳುವ ನಾಲ್ಕು ಸಾಗುವಾನಿ ಮರ ಕಡಿತಲೆ ಮಾಡಿ ನಾಟಾ ಸಂಗ್ರಹ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಾಲು ಸಮೇತ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರ ಬಂಧಿಸಿದ್ದಾರೆ.
ಜಂಟಿ ಸರ್ವೆಗೆ ಸಿಬ್ಬಂದಿ ಕೊರತೆ: ಪ್ರತ್ಯೇಕ ತಂಡ ರಚನೆಗೆ ಪ್ರಸ್ತಾವ
ಜಂಟಿ ಸರ್ವೆಗೆ ಸಿಬ್ಬಂದಿ ಕೊರತೆ: ಪ್ರತ್ಯೇಕ ತಂಡ ರಚನೆಗೆ ಪ್ರಸ್ತಾವ
  • < previous
  • 1
  • ...
  • 405
  • 406
  • 407
  • 408
  • 409
  • 410
  • 411
  • 412
  • 413
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved