• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chikkamagaluru

chikkamagaluru

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರದ್ಧೆಯಿಂದ ವಿದ್ಯಾರ್ಜನೆ ಮಾಡಿದರೆ ಉತ್ತಮ ಭವಿಷ್ಯ: ತಮ್ಮಯ್ಯ
ಚಿಕ್ಕಮಗಳೂರು ನಗರದ ಬಸವನಹಳ್ಳಿ ಬಾಲಿಕಾ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಹಪಠ್ಯ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಶಾಸಕ ಎಚ್‌.ಡಿ. ತಮ್ಮಯ್ಯವಿದ್ಯಾರ್ಥಿಗಳು ಶ್ರದ್ಧೆಯಿಂದ ಶ್ರಮವಹಿಸಿ ವಿದ್ಯಾಭ್ಯಾಸ ಮಾಡಿದರೆ ಮುಂದಿನ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದರು.
ಸಾಗುವಾನಿ, ಹೊನ್ನೆ ಮರಗಳು ಆಕಸ್ಮಿಕ ಬೆಂಕಿಗೆ ಆಹುತಿ
ನರಸಿಂಹರಾಜಪುರ ಪಟ್ಟಣದ ಪ್ರವಾಸಿ ಮಂದಿರ ಸರ್ಕಲ್ ಬಳಿ ಕೂಡಿಟ್ಟಿದ್ದ ಸಾಗುವಾನಿ, ಹಲಸು, ಹೊನ್ನೆ ನಾಟದ ತುಂಡುಗಳಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಸುಟ್ಟು ಹೋಗಿ ಲಕ್ಷಾಂತರ ರು. ನಷ್ಟ ಉಂಟಾಗಿದೆ. ಪಟ್ಟಣ ಪಂಚಾಯಿತಿ ಸದಸ್ಯ, ಜಿ.ಪಿ.ಟಿಂಬರ್ ಮಾಲೀಕ ಮುನಾವರ್ ಪಾಷಾ ಸಮೀಪದ ಜೆ.ಕೆ.ಶಾಮೀಲ್ ಮಿಲ್ಲಿನ ಪಕ್ಕದ ಜಾಗದಲ್ಲಿ ಸಾಗುವಾನಿ, ಹಲಸು ಹಾಗೂ ಹೊನ್ನೆ ನಾಟವನ್ನು ಸಂಗ್ರಹಿಸಿದ್ದರು.
ವಿವಿಧ ಸುರಕ್ಷತಾ ಪರಿಕರ ಬಳಸಲು ಪುರಸಭೆ ಅಧ್ಯಕ್ಷ ಪರಮೇಶ್ ಕರೆ
ಪುರಸಭೆ ಕನಕ ಕಲಾ ಭವನದಲ್ಲಿ ಏರ್ಪಡಿಸಿದ್ದ ಪೌರಕಾರ್ಮಿಕರಿಗೆ ಸುರಕ್ಷತಾ ಪರಿಕರಗಳ ವಿತರಣಾ ಸಮಾರಂಭದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುವಾಗ ವಿವಿಧ ರೀತಿ ತ್ಯಾಜ್ಯ , ಅಪಾಯಕಾರಿ ತ್ಯಾಜ್ಯ ವಸ್ತುಗಳು ಇರುತ್ತವೆ, ಆದುದರಿಂದ ಪೌರಕಾರ್ಮಿಕರು ಕೈಗಳಿಗೆ ಸುರಕ್ಷಿತವಾದ ಹ್ಯಾಂಡ್ ಗ್ಲೌಸ್ ಹಾಕಿ, ಗಮ್ ಬೂಟ್ಸ್, ಹೆಲ್ಮಟ್ ಧರಿಸಬೇಕು ಬಳಸಬೇಕೆಂದು ಪುರಸಭೆ ಅಧ್ಯಕ್ಷ ಪರಮೇಶ್ ಹೇಳಿದ್ದಾರೆ.
ಕುದುರೆಗುಂಡಿಯಲ್ಲಿ ಸಂಭ್ರಮದ ಕಪಿಲಾ ಜಾತ್ರೆ
ಕಪಿಲಾ ಜಾತ್ರೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಶಾಸಕ ಟಿ.ಡಿ.ರಾಜೇಗೌಡರಿಗೆ ದೇವಸ್ಥಾನ ಸಮಿತಿಯಿಂದ ಸನ್ಮಾನಿಸಲಾಯಿತು. ಕುದುರೆಗುಂಡಿ ಮುಖ್ಯ ರಸ್ತೆಯಿಂದ ಕಪಿಲೇಶ್ವರ ದೇವಸ್ಥಾನವರೆಗೆ 10 ಲಕ್ಷ ರು. ವೆಚ್ಚದಲ್ಲಿ ಡಾಂಬರೀಕರಣ ರಸ್ತೆ ಕಾಮಗಾರಿಯನ್ನು ಮಾಡಿಸಿಕೊಟ್ಟ ಶಾಸಕರಿಗೆ ಗೌರವಿಸಲಾಯಿತು.
ಬೋರ್ ವೆಲ್ ಡ್ರಿಲ್ಲಿಂಗ್ ದರ ಹೆಚ್ಚಳ: ವಡೇರಹಳ್ಳಿ ಆಶೋಕ್
ಡಿಸೇಲ್, ಸಾಮಗ್ರಿಗಳ ಬೆಲೆ ಹೆಚ್ಚಳ ಮತ್ತು ಕಾರ್ಮಿಕರ ಕೊರತೆ ಯಾಗಿರುವುದರಿಂದ ಬೋರ್ ವೆಲ್ ಡ್ರಿಲ್ಲಿಂಗ್ ದರವನ್ನು ಹೆಚ್ಚಿಸಲಾಗಿದೆ ಎಂದು ಕಡೂರು ಪಟ್ಟಣದ ಸುರಚಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಚಿಕ್ಕಮಗಳೂರು ಜಿಲ್ಲಾ ಬೋರ್ ವೆಲ್ ಲಾರಿ ಮಾಲೀಕರು ಹಾಗೂ ಏಜೆಂಟರ ಸಭೆಯ ನಂತರ ಬೋರ್ ವೆಲ್ ಏಜೆಂಟರ ಸಂಘದ ಸದಸ್ಯ ವಡೇರಹಳ್ಳಿ ಆಶೋಕ್ ಮಾಹಿತಿ ನೀಡಿದರು.
ವಿವಿಧ ಹಲ್ಲೆ ಘಟನೆಗಳನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
ತರೀಕೆರೆ ಗೇರುಮರಡಿ. ಮೂಡಿಗೆರೆಯಲ್ಲಿ ಯುವಕರ ಮೇಲೆ ನಡೆದ ಹಲ್ಲೆ ಪ್ರಕರಣಗಳನ್ನು ಖಂಡಿಸಿ ಪ್ರಗತಿಪರ ಸಂಘಟನೆಗಳು ಚಿಕ್ಕಮಗಳೂರಲ್ಲಿ ಧರಣಿ ನಡೆಸಿದ ಪ್ರತಿಭಟನಾಕಾರರು ಬಣಕಲ್ ಮುಸ್ಲಿಂ ಯುವಕರಿಗೆ ಬಸ್ ನಿಲ್ದಾಣದಲ್ಲಿ ಹಲ್ಲೆ ಪ್ರಕರಣದಲ್ಲಿ ಹಿಂದು ಸಂಘಟನೆ ಕಾರ್ಯಕರ್ತರನ್ನು ಬಂಧಿಸಿಲ್ಲ , ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.
ವಿವೇಕಾನಂದರ ಆದರ್ಶ ಮೈಗೂಡಿಸಿಕೊಳ್ಳಿ: ಸುಬ್ರಮಣ್ಯ
ಮೆಣಸೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಹವ್ಯಾಸಿ ಕಲಾವಿದ,ಚಿಂತಕ ಸುಬ್ರಮಣ್ಯ ಸ್ವಾಮಿ ವಿವೇಕನಂದರು ಜಗತ್ತು ಕಂಡ ಮಹಾನ್‌ ದಾರ್ಶನಿಕ. ದೇಶಭಕ್ತ. ವಿವೇಕನಂದರ ತತ್ವಾದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಶುಕ್ರವಾರ ನಗರದ ಆಜಾದ್ ಪಾರ್ಕ್‌ನಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನ ಆಶಾ ಕಾರ್ಯಕರ್ತೆಯರು ಕೇಂದ್ರದ ಪ್ರೋತ್ಸಾಹಧನ ಮತ್ತು ರಾಜ್ಯ ಸರ್ಕಾರದ ಗೌರವಧನ ಸೇರಿ ಮಾಸಿಕ 15 ಸಾವಿರ ರು.ಗಳನ್ನು ನೀಡುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗುಜರಾತ್ ಮಾದರಿಯ 2 ಬಾಯ್ಲರ್ ಲೋಕಾರ್ಪಣೆ
ಅಳಲಗೆರೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಸಕರ ನಿಧಿಯಿಂದ ನಿರ್ಮಿಸಿದ ಗುಜರಾತ್ ಮಾದರಿ 2 ಬಾಯ್ಲಾರ್ ನ್ನು ಮಕ್ಕಳೆ ಉದ್ಘಾಟಿಸಿದ ಸಂದರ್ಭದಲ್ಲಿ ಶಾಲೆ ಪ್ರಾಶುಪಾಲರಾದ ಪೂರ್ಣಿಮಾ ಮಾತನಾಡಿ ಕಾಮಗಾರಿ ಮುಗಿದು ಇಂದು ಪ್ರಾರಂಭಿಸುತ್ತಿದ್ದೇವೆ. ಮಕ್ಕಳು ಈ ಬಿಸಿ ನೀರಿನ್ನು ಉಪಯೋಗಿಸಿಕೊಳ್ಳಿ ಎಂದು ಕರೆ ನೀಡಿದರು.
ಉತ್ತಮ ಪ್ರಜೆಗಳ ರೂಪಿಸುವ ಹೊಣೆ ಪೋಷಕರು,ಶಿಕ್ಷಕರ ಮೇಲಿದೆ: ಶಾಸಕ ಟಿ.ಡಿ.ರಾಜೇಗೌಡ
ಪಟ್ಟಣದ ಕೆಳಗಿನಪೇಟೆ ತೋಮರಶೆಟ್ಟಿ ಸ್ಮಾರಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆದ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದ ಶಾಸಕ ಟಿ.ಡಿ.ರಾಜೇಗೌಡ ಮಕ್ಕಳ ಮನಸ್ಸು ಸಂಕುಚಿತಗೊಳ್ಳುವಂತಹ ವಾತಾವರಣ ಶಾಲೆಯಲ್ಲಿ ಸೃಷ್ಟಿಯಾಗದಂತೆ ವಿದ್ಯಾರ್ಥಿಗಳನ್ನು ಬೆಳೆಸಿದಲ್ಲಿ ದೇಶಕ್ಕೆ ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸಿದಂತಾಗುತ್ತದೆ. ಈ ಮಹತ್ತರ ಹೊಣೆಗಾರಿಕೆ ಪೋಷಕರು ಮತ್ತು ಶಿಕ್ಷಕರ ಮೇಲಿದೆ ಎಂದು ಹೇಳಿದರು.
  • < previous
  • 1
  • ...
  • 418
  • 419
  • 420
  • 421
  • 422
  • 423
  • 424
  • 425
  • 426
  • ...
  • 436
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved