ಡೀಮ್ಡ್, ಸೆಕ್ಷನ್ 4 ಬಿಕ್ಕಟ್ಟು ಪರಿಹಾರಕ್ಕೆ ಶೀಘ್ರವೇ ಕೇಂದ್ರ, ಸುಪ್ರೀಂಗೆ ಮನವಿ: ಖಂಡ್ರೆಚಿಕ್ಕಮಗಳೂರು, ಅರಣ್ಯ ಕಾಯಿದೆ 1963ರ ಸೆಕ್ಷನ್ 4ರಡಿ ಅಧಿಸೂಚನೆ ಆಗುವ ಮುನ್ನ ಮಂಜೂರಾಗಿರುವ ಭೂಮಿಯನ್ನು ಅರಣ್ಯದಿಂದ ಕೈಬಿಡಲು ಸರ್ಕಾರಕ್ಕೆ ಅವಕಾಶವಿದೆ. ಅಧಿಸೂಚನೆ ನಂತರ 30-40 ವರ್ಷಗಳಿಂದ ಮನೆ ಕಟ್ಟಿರುವ, ಉಳಿಮೆ ಮಾಡುತ್ತಿರುವ ಜನರಿಗೆ ನ್ಯಾಯ ಕೊಡಿಸಲು ಕೇಂದ್ರ ಹಾಗೂ ಸುಪ್ರೀಂ ಕೋರ್ಟ್ ಗೆ ವಿಶೇಷ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.