ತೋಟಗಾರಿಕೆ ಇಲಾಖೆ ವಿವಿಧ ಯೋಜನೆಗಳಿಗೆ ರೈತರಿಂದ ಅರ್ಜಿ ಆಹ್ವಾನತರೀಕೆರೆ, ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳ್ಳಲಿರುವ ಪ್ರಧಾನ ಮಂತ್ರಿ-ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಪರಿಶಿಷ್ಟ ಜಾತಿ, ಪಂಗಡ, ಮಹಿಳಾ ಹಾಗೂ ಎಲ್ಲಾ ವರ್ಗದ ಫಲಾನುಭವಿಗಳ ರೈತರಿಗೆ ಶೇ.90 ಸಹಾಯಧನ ನೀಡಲು ಅವಕಾಶವಿದ್ದು ಈ ಸಂಬಂಧ ರೈತಬಾಂಧವರು ಅನುಮೋದನೆಗೊಂಡಿರುವ ಕಂಪನಿಗಳ ಮಾಹಿತಿ ಪಡೆದು ನೋಂದಣಿ ಮಾಡಿಕೊಂಡು, ನೇರವಾಗಿ ನೋಂದಾಯಿತ ಕಂಪನಿ ಮೂಲಕ ಅಳವಡಿಸಿ ಕೊಳ್ಳಬೇಕೆಂದು ತರೀಕೆರೆ ತೋಟಗಾರಿಗೆ ಹಿರಿಯ ಸಹಾಯಕ ನಿರ್ದೇಶಕ ಕೆ.ಯತಿರಾಜ್ ಮಾಹಿತಿ ನೀಡಿದ್ದಾರೆ.