ಮಕ್ಕಳ ಜೀವನ ಗುಣಮಟ್ಟ ಸುಧಾರಣೆಗೆ ಬಾಲ ಸ್ವಾಸ್ಥ್ಯ ಯೋಜನೆ: ಮಂಜುನಾಥ್‌

| Published : Mar 08 2024, 01:49 AM IST / Updated: Mar 08 2024, 01:50 AM IST

ಮಕ್ಕಳ ಜೀವನ ಗುಣಮಟ್ಟ ಸುಧಾರಣೆಗೆ ಬಾಲ ಸ್ವಾಸ್ಥ್ಯ ಯೋಜನೆ: ಮಂಜುನಾಥ್‌
Share this Article
  • FB
  • TW
  • Linkdin
  • Email

ಸಾರಾಂಶ

ಮಕ್ಕಳ ಜೀವನದ ಗುಣಮಟ್ಟವನ್ನು ಸುಧಾರಿಸುವ ಸಲುವಾರಿ ರಾಷ್ಟ್ರೀಯ ಸ್ಥಾಸ್ಥ್ಯ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಿದೆ.

ಸಿರಿಗೆರೆ:ಮಕ್ಕಳ ಜೀವನದ ಗುಣಮಟ್ಟವನ್ನು ಸುಧಾರಿಸುವ ಸಲುವಾರಿ ರಾಷ್ಟ್ರೀಯ ಸ್ಥಾಸ್ಥ್ಯ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಿದೆ. ಇದರ ಮೂಲಕ ಸಮುದಾಯದ ಎಲ್ಲಾ ಮಕ್ಕಳ ಸಮಗ್ರ ಆರೈಕೆ ಮಾಡುವ ಕೆಲಸವನ್ನು ಮಾಡಲಾಗುತ್ತಿದೆ ಎಂದು ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.‌ಎಸ್. ಮಂಜುನಾಥ್‌ ತಿಳಿಸಿದರು.

ಭರಮಸಾಗರ ಸಮೀಪದ ಬೇವಿನಹಳ್ಳಿಯಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಸ್ವಾಸ್ಥ್ಯ ಆರೋಗ್ಯ ಯೋಜನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಯೋಜನೆಯಡಿಯಲ್ಲಿ ಹುಟ್ಟಿನ ದೋಷ, ರೋಗ, ನ್ಯೂನತೆ ಮತ್ತು ಬೆಳವಣಿಗೆಯ ವಿಳಂಬ ಮುಂತಾದ ಆರೋಗ್ಯ ನಿರ್ವಹಣೆ ಮಾಡಲಾಗುವುದು ಎಂದರು.

18 ವರ್ಷದ ಮಕ್ಕಳನ್ನು 4 ವಿಭಾಗಗಳನ್ನಾಗಿ ಮಾಡಿ ಅವರ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವ ಕೆಲಸ ಮಾಡಲಾಗುವುದು. ಈ ಸೌಲಭ್ಯವು ಉಚಿತವಾಗಿ ಸಮುದಾಯದ ಎಲ್ಲ ವರ್ಗದ ಜನರಿಗೆ ಸಿಗುತ್ತದೆ. ಇದರಿಂದ ಮಕ್ಕಳ ಆರೋಗ್ಯ ವೆಚ್ಚ ಗಣನೀಯವಾಗಿ ಕಡಿಮೆಯಾಗುತ್ತದೆ ಎಂದರು.

ಮಕ್ಕಳ ತಪಾಸಣೆಗೆ ಅನುಕೂಲವಾಗುವಂತೆ, ಅಂಗನವಾಡಿ ಕೇಂದ್ರಗಳಲ್ಲಿ ದಾಖಲಾದ 0ರಿಂದ 6 ವರ್ಷದೊಳಗಿನ ಮಕ್ಕಳನ್ನು ಪರೀಕ್ಷಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಸರ್ಕಾರಕ್ಕೆ ದಾಖಲಾದ ಮಕ್ಕಳನ್ನು ಪರೀಕ್ಷಿಸಲು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಗಳು ಮುಂದಾಗಿವೆ ಎಂದರು.

ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಜಿಲ್ಲೆಯ ೫೩೦ ಅಂಗನವಾಡಿ ಕೇಂದ್ರಗಳಲ್ಲಿ ೨೫,೯೩೩ ಮಕ್ಕಳು, ೪೩೪ ಶಾಲೆಗಳಲ್ಲಿ ೪೫,೨೭೮ ಮಕ್ಕಳು ಇದ್ದು ಅವರನ್ನು ಆರೋಗ್ಯ ತಪಾಸಣೆಗೆ ವರ್ಷದಲ್ಲಿ ಒಂದು ಬಾರಿಯಾದರು ಒಳಪಡಿಸಬೇಕು ಎಂದರು.

ಬೇವಿನಹಳ್ಳಿ ಮತ್ತು ನಂದಿಹಳ್ಳಿ ಗ್ರಾಮಗಳಲ್ಲಿನ ೫ ಅಂಗನವಾಡಿ ಕೇಂದ್ರಗಳ ೧೫೧ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು.

ಡಾ.ಮಹೇಂದ್ರ ಕುಮಾರ್, ಡಾ.ಸುಪ್ರಿತಾ, ಶುಶ್ರೂಷಕಿ ಪೂಜಾ, ಸಮುದಾಯ ಆರೋಗ್ಯಾಧಿಕಾರಿ ಬಿ.ಕೆ.ಸುಧಾ, ಪ್ರಾಥಮಿಕ ಆರೋಗ್ಯ ಸುರಕ್ಷತಾ ಆಧಿಕಾರಿ ಮಲ್ಲಮ್ಮ, ಆಶಾ ಕಾರ್ಯಕರ್ತೆಯರಾದ ರಾಜೇಶ್ವರಿ, ಜ್ಯೋತಿಬಾಯಿ, ಅಂಗನವಾಡಿ ಕಾರ್ಯಕರ್ತೆಯರಾದ ನೇತ್ರಾವತಿ ಶಿವಮ್ಮ ಭಾಗವಹಿಸಿದ್ದರು.