ದಾಬಸ್‍ಪೇಟೆ: ನೆಲಮಂಗಲ ತಾಲೂಕಿನ ಬಾಣವಾಡಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಬಾಣವಾಡಿ ಗ್ರಾಮದ ಕೆರೆಯಲ್ಲಿ 3 ತಿಂಗಳ ಮಗುವಿನ ಮೃತದೇಹ ಪತ್ತೆಯಾಗಿದೆ. ಕೆರೆಯ ನೀರಿನಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಮಗುವನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಗುವನ್ನುಪೋಷಿಸಲು ಸಾಧ್ಯವಾಗದೇ ಕೆರೆಗೆ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಕುದೂರು ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮಗು ಎಸೆದವರ ಪತ್ತೆಗೆ ಮುಂದಾಗಿದ್ದಾರೆ.