ಸಾರಾಂಶ
14 ವರ್ಷದ ಒಳಗಿನ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವುದನ್ನು ನಿಷೇಧ ಮಾಡಿದ್ದು ಈ ಮಕ್ಕಳು ಶಿಕ್ಷಣ ಪಡಯಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮಹಾಲಕ್ಷ್ಮಿ ಹೇಳಿದರು.
ಚನ್ನಗಿರಿಯಲ್ಲಿ ಬಾಲಕಾರ್ಮಿಕ ವಿರೋಧಿ ದಿನ
ಕನ್ನಡಪ್ರಭ ವಾರ್ತೆ ಚನ್ನಗಿರಿ14 ವರ್ಷದ ಒಳಗಿನ ಮಕ್ಕಳು ಬಾಲ ಕಾರ್ಮಿಕರಾಗಿ ದುಡಿಯುವುದನ್ನು ನಿಷೇಧ ಮಾಡಿದ್ದು ಈ ಮಕ್ಕಳು ಶಿಕ್ಷಣ ಪಡಯಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದೆ. ಇದರ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಇಲ್ಲಿನ ಜೆ.ಎಂ.ಎಫ್.ಸಿ ನ್ಯಾಯಾಲಯದ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಮಹಾಲಕ್ಷ್ಮಿ ಹೇಳಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಗುರುವಾರ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕು ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ಯಾವುದೇ ಕ್ಷೇತ್ರದಲ್ಲಾಗಲಿ ಬಾಲ ಕಾರ್ಮಿಕರನ್ನು ಬಳಸಿಕೊಂಡು ಕೆಲಸ ಮಾಡಿಸುವುದು ಅಪರಾಧವಾಗಿದ್ದು ಇಂತಹ ಮಕ್ಕಳು ಎಲ್ಲಿಯೇ ದುಡಿಯುತ್ತಿರಲಿ ಸಂಬಂಧ ಪಟ್ಟ ಇಲಾಖೆಗಳಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.ಈ ಸಮಾರಂಭದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷ ಎಂ.ರಾಜಪ್ಪ ವಹಿಸಿ ಮಾತನಾಡಿ ಬಾಲ ಕಾರ್ಮಿಕರಿಂದ ದುಡಿಸಿಕೊಳ್ಳುವುದು ಅಪರಾಧವಾಗಿದ್ದು ಇಂತಹ ಮಕ್ಕಳು ಎಲ್ಲಾದರೂ ಕಂಡು ಬಂದರೆ ಸಂಬಂಧ ಪಟ್ಟ ಇಲಾಖೆಗಳಾದ ಮಹಿಳಾ ಮತ್ತು ಮಕ್ಕಳಾಭಿವೃದ್ದಿ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ ಇವುಗಳಿಗೆ ಮಾಹಿತಿ ನೀಡಿ ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ಚನ್ನಗಿರಿ ವೃತ್ತದ ಕಾರ್ಮಿಕ ನಿರೀಕ್ಷಕ ರಾಜಣ್ಣ, ಸ.ಪ.ಪೂ ಕಾಲೇಜಿನ ಪ್ರಾಚಾರ್ಯ ಲೋಹಿತಾಶ್ವ, ವಕೀಲರ ಸಂಘದ ಕಾರ್ಯದರ್ಶಿ ಜಗದೀಶ್, ಸಿ.ತಿಪ್ಪೇಶ್ ಉಪಸ್ಥಿತರಿದ್ದರು.