ಫಲಾನುಭವಿಗಳ ಸೌಲಭ್ಯ ತಲುಪಿಸಲು ಪ್ರಾಮಾಣಿಕತೆ ಅಗತ್ಯಚಳ್ಳಕೆರೆ: ಸರ್ಕಾರ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳನ್ನು ಗುರುತಿಸಿ, ಇಲಾಖೆ ಮೂಲಕ ಅವರಿಗೆ ಸೌಲಭ್ಯವನ್ನು ಪ್ರಾಮಾಣಿಕವಾಗಿ ತಲುಪಿಸುವ ಕಾರ್ಯವನ್ನು ನಿರಂತರ ಮಾಡುತ್ತಿದೆ. ವಿಕಲಚೇತನರು, ಕಾರ್ಮಿಕರು ಹಲವಾರು ವರ್ಗಗಳಿಗೆ ಸರ್ಕಾರದ ನೆರವು ತಲುಪಿಸುವ ಕಾರ್ಯವನ್ನು ಅಧಿಕಾರಿವರ್ಗ ಪ್ರಾಮಾಣಿಕವಾಗಿ ಮಾಡಬೇಕೆಂದು ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ತಿಳಿಸಿದರು.