ಹಳ್ಳಿಗಳಲ್ಲಿ ಶಾಲೆ ನಿರ್ಮಾಣ ಶಿವಕುಮಾರ ಶ್ರೀ ಸಂಕಲ್ಪವಾಗಿತ್ತುಗ್ರಾಮೀಣ ಭಾಗಗಳಲ್ಲಿ ಶಾಲೆಗಳನ್ನು ತೆರೆದು ಶಿಕ್ಷಣ ವಂಚಿತರಿಗೆ ಸೌಲಭ್ಯಗಳನ್ನು ನೀಡಬೇಕೆಂಬ ಸಂಕಲ್ಪವು ನಮ್ಮ ಗುರುಗಳಾದ ಶಿವಕುಮಾರ ಶ್ರೀ ಮಹದಾಸೆಯಾಗಿತ್ತು ಎಂದು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಸಿರಿಗೆರೆಯಲ್ಲಿ ನಡೆಯುತ್ತಿರುವ ಶಿವಕುಮಾರ ಶ್ರೀ ಶ್ರದ್ಧಾಂಜಲಿ ಅಂಗವಾಗಿ ಆಯೋಜಿಸಿದ್ದ ಹಿರಿಯ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ನಿವೃತ್ತ ನೌಕರರ ಸಮಾವೇಶದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.