• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • chitradurga

chitradurga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿ
ಕ್ರೀಡೆಗಳು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗುತ್ತವೆ ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಸಂಪತ್ ಕುಮಾರ್ ಹೇಳಿದರು. ನಗರದ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ಕಡ್ಲೇಗುದ್ದು ಆಂಜನೇಯ ಸ್ವಾಮಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಹಿರೇ ಗುಂಟನೂರು ಹೋಬಳಿ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ.
ಹೊಸದುರ್ಗದಲ್ಲಿ ಕ್ಲೋರಿನ್‌ ಸೋರಿಕೆ: 50ಕ್ಕೂ ಹೆಚ್ಚು ಜನರು ಆಸ್ವಸ್ಥ
ನೀರು ಶುದ್ಧೀಕರಣ ಮಾಡಲು ಬಳಸುವ ಕ್ಲೋರಿನ್‌ ಸಿಲಿಂಡರ್‌ ಸೋರಿಕೆಯಾಗಿ ಉಂಟಾದ ವಾಸನೆಯಿಂದ ಸುಮಾರು 50 ಕ್ಕೂ ಹೆಚ್ಚು ಜನರು ಅಸ್ವಸ್ಥರಾದ ಘಟನೆ ಪಟ್ಟಣದಲ್ಲಿ ಸೋಮವಾರ ಸಂಜೆ ನಡೆದಿದೆ.ಹೊಸದುರ್ಗ ಪಟ್ಟಣಕ್ಕೆ ಕೆಲ್ಲೋಡು ಬಳಿ ವೇದಾವತಿ ನದಿಗೆ ನಿರ್ಮಿಸಲಾಗಿರುವ ಬ್ಯಾರೇಜ್‌ನಿಂದ ನೀರನ್ನು ಶುದ್ಧೀಕರಿಸಿ ಸರಬರಾಜು ಮಾಡಲಾಗುತ್ತದೆ. ಪಟ್ಟಣದ ಎಪಿಎಂಸಿ ಮಾರುಕಟ್ಟೆ ಮುಂಭಾಗದಲ್ಲಿರುವ ಶುದ್ಧೀಕರಣ ಘಟಕದಲ್ಲಿ ನೀರು ಶುದ್ಧೀಕರಣಕ್ಕಾಗಿ ದೊಡ್ಡ ಪ್ರಮಾಣದ ಕ್ಲೋರಿನ್‌ ಸಿಲಿಂಡರ್ ಇಡಲಾಗಿದೆ. ಸೋಮವಾರ ಸಂಜೆ ಇದ್ದಕ್ಕಿದ್ದಂತೆ ಈ ಸಿಲಿಂಡರ್‌ನಿಂದ ಕ್ಲೋರಿನ್‌ ಸೋರಿಕೆಯಾಗಿ ಆ ಭಾಗದಲ್ಲಿ ಇಡೀ ವಾತಾವರಣವೇ ಕಲುಷಿತ ಗೊಂಡಿದೆ.
ಕಬ್ಬಿಣಾಂಶ ಕೊರತೆ ನೀಗಿಸಿ, ಸುರಕ್ಷಿತ ತಾಯ್ತನ ಕಾಪಾಡಿ
ಗರ್ಭಿಣಿಯರು ಕಬ್ಬಿಣಾಂಶದ ಕೊರತೆ ನೀಗಿಸಿಕೊಂಡು ಸುರಕ್ಷಿತ ತಾಯ್ತನ ಪಡೆಯಬೇಕು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಬಿ.ವಿ. ಗಿರೀಶ ಹೇಳಿದರು. ಚಿತ್ರದುರ್ಗ ತಾಲೂಕಿನ ಹಾಯ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಜರುಗಿದ ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾನವ ಸರಪಳಿ ನಿರ್ಮಾಣಕ್ಕೆ ಎಲ್ಲರ ಸಹಕಾರವಿರಲಿ
ತಾಲೂಕು ವ್ಯಾಪ್ತಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸುಮಾರು 43 ಕಿ.ಮೀ ಉದ್ದದ ಮಾನವ ಸರಪಳಿ ನಿರ್ಮಾಣಕ್ಕೆ ಎಲ್ಲರ ಸಹಕಾರ ಇರಬೇಕು ಎಂದು ಸಚಿವ ಡಿ. ಸುಧಾಕರ್ ಹೇಳಿದರು.
ಗುಡಿಸಲು ಬೆಂಕಿಗಾಹುತಿ: ಮಹಿಳೆ ಕುಟುಂಬಕ್ಕೆ ನೆರವು
ತಾಲೂಕಿನ ಮ್ಯಾದನಹೊಳೆ ಗ್ರಾಮದ ಎಸ್.ಸಿ ಕಾಲೋನಿಯ ರೇಣುಕಮ್ಮ ಎನ್ನುವವರ ಗುಡಿಸಲು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಆಕೆಗೆ ಯಾವುದೇ ಪ್ರಾಣಾಪಾಯವಾಗಿಲ್ಲ. ಗುಡಿಸಲಿನಲ್ಲಿದ್ದ ದಿನಬಳಕೆಯ ವಸ್ತುಗಳೆಲ್ಲಾ ಸುಟ್ಟು ಹೋಗಿರುವುದರಿಂದ ಮಹಾನಾಯಕ ದಲಿತಸೇನೆ ಸಂಘಟನೆಯವರು ದಾನಿಗಳ ಸಹಕಾರದಿಂದ ಮ್ಯಾದನಹೊಳೆ ಗ್ರಾಮಕ್ಕೆ ಭೇಟಿ ನೀಡಿ ದಿನಸಿ, ತಾಯಿ ಮಕ್ಕಳಿಗೆ ಉಡುಪು, ಶಾಲಾ ಬ್ಯಾಗ್, ಪುಸ್ತಕ, ಚಾಪೆ, ಬೆಡ್ ಶೀಟ್, ಪಾತ್ರೆ ಸಾಮಾನು ಹಾಗೂ ಇತರೆ ದಿನೋಪಯೋಗಿ ವಸ್ತುಗಳನ್ನು ನೀಡಿದರು. ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಕೆಪಿ. ಶ್ರೀನಿವಾಸ್, ತಾಲೂಕು ಅಧ್ಯಕ್ಷ ರಾಘವೇಂದ್ರ, ಸಂಘಟನಾ ಕಾರ್ಯದರ್ಶಿ ರಾಘು ಓಬಳಾಪುರ, ಕಾರ್ಯದರ್ಶಿ ದಯಾನಂದ್ ಉಪ್ಪಳಗೆರೆ, ಹನುಮಂತರಾಯ ಹೂವಿನಹೊಳೆ, ವಸಂತಕುಮಾರ್, ದೊರೇಶ್ ಮುಂತಾದವರು ಉಪಸ್ಥಿತರಿದ್ದರು.
ವಾರದಿಂದ ಬೇವಿನ ಮರದಲ್ಲಿ ಜಿನುಗುತ್ತಿದೆ ಹಾಲು?
ಕಳೆದೊಂದು ವಾರದಿಂದ ಬೇವಿನ ಮರದಿಂದ ಹಾಲು ರೂಪದ ದ್ರವ ಸೋರುತ್ತಿದ್ದು, ಜನಮರುಳೋ ಜಾತ್ರೆ ಮರುಳೋ ಎಂಬಂತೆ ಮರಕ್ಕೆ ಪೂಜೆ ಸಲ್ಲಿಸುತ್ತಿರುವ ಘಟನೆ ತಾಲೂಕಿನ ಬಿಜಿಕೆರೆ ಸಮೀಪದ ಬುಕ್ಲೂರಹಳ್ಳಿ ಗೇಟ್ ನಲ್ಲಿ ನಡೆದಿದೆ.ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ 150ಎ ಗೆ ಅಂಟಿಕೊಂಡಂತಿರುವ ಬೇವಿನ ಮರದಲ್ಲಿ ಕಳೆದೊಂದು ವಾರದಿಂದ ಬಿಳಿ ಹಾಲು ರೂಪದ ದ್ರವ ಜಿನುಗುತ್ತಿದೆ. ಜನತೆ ಇದನ್ನು ಪವಾಡವೆಂದೇ ನಂಬಿ ಪೂಜಿಸಿ ಭಕ್ತಿಯನ್ನು ಮೆರೆಯೆಯುತ್ತಿದ್ದಾರೆ. ಈ ದೃಶ್ಯ ನೋಡಲು ತಂಡೋಪ ತಂಡವಾಗಿ ಆಗಮಿಸುತ್ತಿದ್ದು ಸ್ಥಳವು ಪವಾಡ ಸದೃಶ ಸ್ಥಳವಾಗಿ ಮಾರ್ಪಾಟಾಗಿದೆ.
ಮಕ್ಕಳ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಅಗತ್ಯ
ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಬಿಇಒ ಕೆ.ಎಸ್ ಸುರೇಶ್ ತಿಳಿಸಿದರು.
ಗಣೇಶ ಉತ್ಸವದ ಶೋಭಾಯಾತ್ರೆ ಯಶಸ್ವಿಗೊಳಿಸಿ
ಸುಮಾರು ಆರು ವರ್ಷಗಳಿಂದ ನಗರದ ಬಿಇಒ ಕಚೇರಿ ಆವರಣದಲ್ಲಿ ಹಿಂದೂ ಮಹಾಗಣಪತಿ ಪೂಜಾ ಕಾರ್ಯವನ್ನು ನೆರವೇರಿಸುತ್ತಿದ್ದು, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಸಹಯೋಗದೊಂದಿಗೆ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಶೋಭಾಯಾತ್ರೆಯೂ ಸೇರಿದಂತೆ ಗಣೇಶನ ಉತ್ಸವಕ್ಕೆ ಹೆಚ್ಚಿನ ಸಹಕಾರ ನೀಡಬೇಕೆಂದು ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಕೆ.ಸಿ.ನಾಗರಾಜು ಮನವಿ ಮಾಡಿದರು.
ನೀರಿಗಾಗಿ ಪಾದಯಾತ್ರೆ ಮಾಡಲು ರೈತ ಸಂಘ ನಿರ್ಧಾರ
ತಾಲೂಕಿನ ವಿವಿ ಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳ್ಳಿಗಳ ಕೆರೆಗಳಿಗೆ ನೀರು ಹರಿಸಲು ಆಗ್ರಹಿಸಿ ವಿವಿ ಪುರದಿಂದ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಲು ರೈತ ಸಂಘದಿಂದ ಬೀರೇನಹಳ್ಳಿಯಲ್ಲಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಯಿತು.
ವಿತರಕರ ಕ್ಷೇಮಾಭಿವೃದ್ಧಿ ನಿಧಿಗೆ ₹10ಕೋಟಿ ನೀಡುವಂತೆ ಸಿಎಂಗೆ ಮನವಿ
ಸಂಕಷ್ಟದ ಪರಿಸ್ಥಿತಿ ಎದುರಿಸುವ ಪತ್ರಿಕಾ ವಿತರಕರ ನೆರವಿಗೆ ಧಾವಿಸುವ ಸಂಬಂಧ ₹10ಕೋಟಿಯ ಕ್ಷೇಮಾಭಿವೃದ್ದಿ ನಿಧಿ ಸ್ಥಾಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಯೋಜನೆ, ಸಾಂಖ್ಯಿಕ ಸಚಿವ ಡಿ. ಸುಧಾಕರ್ ಹೇಳಿದರು.
  • < previous
  • 1
  • ...
  • 154
  • 155
  • 156
  • 157
  • 158
  • 159
  • 160
  • 161
  • 162
  • ...
  • 361
  • next >
Top Stories
ಟೊಮೊಟೊ ದರ ಪಾತಾಳಕ್ಕೆ : ಬೆಳೆ ಕಟಾವು ಕೈಬಿಟ್ಟ ರೈತ
ಕೊಲೆಯಾದವಳೇ ಬಂದು ಬಾಗಿಲು ತೆಗೆದಾಗ!
ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...
ಶ್ರೀನಗರ, ಉರಿ, ಬಾರಾಮುಲ್ಲಾ ಜನರೀಗ ನಿರಾಳ
ರೇಪ್‌ ಕೇಸಲ್ಲಿ ತಾಯಿಯ ದೂರಷ್ಟೇ ಸಾಲಲ್ಲ: ಕೋರ್ಟ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved