ಹಿರಿಯೂರು ತಾಲೂಕಾದ್ಯಂತ ಯೋಗಾಯೋಗಹಿರಿಯೂರು, ತಾಲೂಕಿನ ವಿವಿಧೆಡೆ ಶುಕ್ರವಾರ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು. ನಗರದ ನ್ಯಾಯಾಲಯದ ಸಂಕೀರ್ಣದಲ್ಲಿ ನಡೆದ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುಜಾತಾ ಸುವರ್ಣ ಬಿ. ಉದ್ಘಾಟನೆ ಮಾಡಿದರು. ಈ ವೇಳೆ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕ ಜಿ ಪರಮೇಶ್ವರಪ್ಪ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಶಿಲ್ಪಾ ತಿಮ್ಮಾಪುರ, ಅಪರ ಸಿವಿಲ್ ನ್ಯಾಯಾಧೀಶ ಎಚ್. ಡಿ. ಶ್ರೀಧರ್ ಮುಂತಾದವರು ಉಪಸ್ಥಿತರಿದ್ದರು.