ಪೌರ ಸೇವಾ ನೌಕರರ ಮುಷ್ಕರಕ್ಕೆ ತಾತ್ಕಾಲಿಕ ತೆರೆಚಿತ್ರದುರ್ಗ: ಪ್ರಮುಖ 19 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಳೆದ ಐದು ದಿನಗಳಿಂದ ಮುಷ್ಕರದಲ್ಲಿ ನಿರತರಾಗಿದ್ದ ಪೌರ ಸೇವಾ ನೌಕರರು, ಕಾರ್ಮಿಕರು ತಾತ್ಕಾಲಿಕವಾಗಿ ಹೋರಾಟದಿಂದ ಹಿಂದೆ ಸರಿದಿದ್ದಾರೆ. ಸಂಘದ ರಾಜ್ಯಾಧ್ಯಕ್ಷ ಪ್ರಭಾಕರ ಅವರು ಶನಿವಾರ ಪೌರ ಕಾರ್ಮಿಕರ ಜೊತೆ ಮಾತುಕತೆ ನಡೆಸಿ, ಸರ್ಕಾರ ನೀಡಿರುವ ಭರವಸೆ ಮನವರಿಕೆ ಮಾಡಿಕೊಟ್ಟ ನಂತರ ಮುಷ್ಕರ ಕೈ ಬಿಡಲಾಯಿತು.