ಎಸ್.ನಿಜಲಿಂಗಪ್ಪ ಮನೆ ಖರೀದಿ ಬೇಗ ಮುಗಿಯಲಿರಾಷ್ಟ್ರನಾಯಕ, ಕರ್ನಾಟಕ ಏಕೀಕರಣದ ನೇತಾರ ಎಸ್.ನಿಜಲಿಂಗಪ್ಪ ನಾಡು ಕಂಡ ಅಪರೂಪದ ರಾಜಕಾರಣಿ. ಅವರು ಜೀವಿಸಿದ ನಿವಾಸವನ್ನು ರಾಜ್ಯ ಸರ್ಕಾರ ಖರೀದಿಸಿ ಸ್ಮಾರಕ ಮಾಡುವ ಕೆಲಸ ತುರ್ತಾಗಿ ಆಗಲಿ ಎಂದು ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಎಚ್.ಟಿ.ಬಳೆಗಾರ್ ಆಗ್ರಹಿಸಿದ್ದಾರೆ.