ಕನ್ನಡಪ್ರಭ ವಾರ್ತೆ ಉಡುಪಿ
ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕಸ್ತೂರಿ ರಂಗನ್ ವರದಿ ಜಾರಿಗೆ ಮುಂಚೆ ಜನರ ವಿಶ್ವಾಸ ಪಡೆದು ಗೊಂದಲವನ್ನು ನಿವಾರಿಸಬೇಕು ಎಂದು ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.ಈ ಬಗ್ಗೆ ಸಮಿತಿ ವತಿಯಿಂದ ಸೋಮವಾರ, ಜಿಲ್ಲಾಧಿಕಾರಿಯವರಿಗೆ ಮನವಿ ನೀಡಿ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ಮಂಜುನಾಥ್ ಶೆಟ್ಟಿ ಹಾಗೂ ಮಾಜಿ ಅಧ್ಯಕ್ಷ ಪ್ರದೀಪ್ ಕೊಠಾರಿ, ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮದ ಸುಮಾರು 4,358 ಎಕರೆ ಭೂಮಿ ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಿ, ಕೇಂದ್ರ ಪರಿಸರ, ಅರಣ್ಯ ಸಚಿವಾಲಯ ಮತ್ತೊಮ್ಮೆ ಕರಡು ಅಧಿಸೂಚನೆ ಹೊರಡಿಸಿದೆ.ಈ ಪ್ರಕಾರ ಹಳ್ಳಿಹೊಳೆ ಗ್ರಾಮದ 7,240.50 ಎಕರೆ ಭೂಮಿಯನ್ನು ಪರಿಸರ ಸೂಕ್ಷ್ಮ ಪ್ರದೇಶದಿಂದ ( ಜನವಸತಿ ಪ್ರದೇಶ) ಮ್ಯಾನುವಲ್ ಸರ್ವೇ ಮಾಡಿ ಕೈ ಬಿಡುವ ಕುರಿತು ಸೆ.25 ರಂದು ನಡೆದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದವರು ತಿಳಿಸಿದರು.ಯೋಜನೆ ಜಾರಿಗೂ ಮುನ್ನ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಗ್ರಾಮಸ್ಥರಲ್ಲಿ ಇರುವ ಗೊಂದಲವನ್ನು ಪರಿಹರಿಸಬೇಕು ಎಂದವರು ಆಗ್ರಹಿಸಿದರು.ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಪ್ರಭಾಕರ್ ನಾಯ್ಕ್, ಜಯರಾಮ್ ಪೂಜಾರಿ, ಸುರೇಶ್ ಪೂಜಾರಿ, ಸುಜಾತ ಭೋವಿ, ನೇತ್ರಾವತಿ ಉಪಸ್ಥಿತರಿದ್ದರು.ಕಸ್ತೂರಿ ರಂಗನ್ ವರದಿ ಜಾರಿಗೆ ಮೊದಲು ಜನರ ಗೊಂದಲ ನಿವಾರಿಸಿ: ಆಗ್ರಹ
ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ಕಸ್ತೂರಿ ರಂಗನ್ ವರದಿ ಜಾರಿಗೆ ಮುಂಚೆ ಜನರ ವಿಶ್ವಾಸ ಪಡೆದು ಗೊಂದಲವನ್ನು ನಿವಾರಿಸಬೇಕು ಎಂದು ಬೈಂದೂರು ತಾಲೂಕಿನ ಹಳ್ಳಿಹೊಳೆ ಗ್ರಾಮ ಹಿತರಕ್ಷಣಾ ಸಮಿತಿ ಆಗ್ರಹಿಸಿದೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.