ಸಾರಾಂಶ
ಹುಬ್ಬಳ್ಳಿ : ಲೋಕಸಭಾ ಚುನಾವಣೆಯ ಫಲಿತಾಂಶ ಜೂ. 4ರಂದು ಪ್ರಕಟಗೊಳ್ಳುವ ಹಿನ್ನೆಲೆಯಲ್ಲಿ ಶನಿವಾರ ಧಾರವಾಡ ಗ್ರಾಮೀಣ ಲೋಕಸಭಾ ಕ್ಷೇತ್ರದ ಮತ ಎಣಿಕೆ ಏಜೆಂಟರ ಸಭೆಯನ್ನು ಇಲ್ಲಿನ ಅರವಿಂದ ನಗರದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ ನಡೆಸಿದರು.
ಈ ವೇಳೆ ಮಾತನಾಡಿದ ಶಾಸಕರು, ಸಾಕಷ್ಟು ಚುನಾವಣೆಗಳಲ್ಲಿ ಮತ ಎಣಿಕೆ ಏಜೆಂಟರಾಗಿ ಕೆಲಸ ಮಾಡಿದ್ದೀರಿ. ಅಲ್ಲಿ ನಾವು ಯಾವ ರೀತಿ ಇರಬೇಕು, ಮತ್ತೆ ಪ್ರತಿ ಬೂತಿನ ಫಲಿತಾಂಶದ ಎಲ್ಲ ಅಭ್ಯರ್ಥಿಗಳ ಅಂಕಿ-ಸಂಖ್ಯೆಗಳನ್ನು ಪಕ್ಷ ನೀಡಿದ ದಾಖಲೀಕರಣ ಪತ್ರದಲ್ಲಿ ದಾಖಲಿಸಬೇಕು. ಶಿಸ್ತು ಬದ್ಧವಾಗಿ ಕಾರ್ಯನಿರ್ವಹಣೆ ಮತ್ತು ಸಕಾಲಕ್ಕೆ ಹಾಜರಿದ್ದು ಕೌಂಟಿಂಗ್ ಮುಗಿಯುವ ವರೆಗೆ ಸ್ಥಳದಲ್ಲಿಯೇ ಇರುವುದು ಸೇರಿದಂತೆ ವಿವಿಧ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.
ಈ ವೇಳೆ ಜಿಲ್ಲಾಧ್ಯಕ್ಷ ನಿಂಗಪ್ಪ ಸುತಗಟ್ಟಿ, ಪ್ರಮುಖರಾದ ಶಶಿಮೌಳಿ ಕುಲಕರ್ಣಿ, ಜಯತೀರ್ಥ ಕಟ್ಟಿ, ಬಸವರಾಜ ಕುಂದಗೋಳಮಠ, ಸುಭಾಷ ಚವ್ಹಾಣ, ಶಂಕರ ಮುಗದ, ಮಹಾಂತೇಶ ಶ್ಯಾಗೋಟಿ, ಶಿವಾನಂದ ಗುಂಡಗೋವಿ, ರುದ್ರಪ್ಪ ಅರಿವಾಳ, ಮೃತ್ಯುಂಜಯ ಹಿರೇಮಠ, ಷಣ್ಮುಖ ಗುರಿಕಾರ ಸೇರಿದಂತೆ ಹಲವರಿದ್ದರು.