ಕನ್ನಡಪ್ರಭ ವಾರ್ತೆ ಬಾಗಲಕೋಟೆನೂತನವಾಗಿ ಆರಂಭಗೊಂಡಿರುವ ಬಿವಿವಿ ಸಂಘದ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಮಹಾವಿದ್ಯಾಲಯಕ್ಕೆ ವಿವಿಧ ಕೋರ್ಸ್ಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಪರಿಶೀಲನಾ ಸಮಿತಿಯು ಮಹಾವಿದ್ಯಾಲಯಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಪರಿಶೀಲನಾ ಸಮಿತಿಯ ಸದಸ್ಯರು ಪಂ.ಪುಟ್ಟರಾಜ ಗವಾಯಿ ಹಾಗೂ ಹಾನಗಲ್ ಕುಮಾರೇಶ್ವರ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿ, ಬಳಿಕ ಮಹಾವಿದ್ಯಾಲಯದ ಮೂಲಸೌಕರ್ಯ, ಗಾಯನ, ತಬಲಾ, ಸಿತಾರ್ ಹಾಗೂ ಭರತನಾಟ್ಯ ವಿಭಾಗಗಳ ತರಗತಿ ಕೊಠಡಿಗಳು, ಸಂಗೀತ ಮತ್ತು ಪ್ರದರ್ಶಕ ಕಲೆಗಳಿಗೆ ಅಗತ್ಯವಿರುವ ಸೌಲಭ್ಯಗಳು, ಗ್ರಂಥಾಲಯ, ಆಡಳಿತ ವ್ಯವಸ್ಥೆ ಸೇರಿದಂತೆ ವಿವಿಧ ಶೈಕ್ಷಣಿಕ ವ್ಯವಸ್ಥೆಗಳನ್ನು ಪರಿಶೀಲಿಸಿದರು.ವಿವಿಧ ಕೋರ್ಸ್ಗಳನ್ನು ಆರಂಭಿಸಲು ಅಗತ್ಯವಿರುವ ಮಾನದಂಡಗಳ ಕುರಿತು ಮಾಹಿತಿ ಪಡೆದು ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದ ಸಮಿತಿ ಸದಸ್ಯರು, ಬಸವೇಶ್ವರ ಕಲಾ ಮಹಾವಿದ್ಯಾಲಯದ ಹಿಂದುಸ್ಥಾನಿ ಸಂಗೀತ ವಿಭಾಗದಿಂದ ಆಯೋಜಿಸಿದ್ದ ವಿವಿಧ ಸಂಗೀತ ಕಾರ್ಯಕ್ರಮಗಳು ಹಾಗೂ ಸಾಧನೆಗಳ ದಾಖಲಾತಿಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಅನುಮೋದನಾ ಸಮಿತಿಯ ಸದಸ್ಯರಾದ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ರಾಮಕೃಷ್ಣಯ್ಯ, ತಜ್ಞರಾದ ಡಾ.ಸುಮಿತ್ರಾ ಹಿರೇಮಠ ಅವರನ್ನು ಬಿ.ವಿ.ವಿ.ಸಂಘದಿಂದ ಗೌರವಿಸಿ ಸನ್ಮಾನಿಸಲಾಯಿತು.ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಬಾವಿ, ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಅಶೋಕ ಸಜ್ಜನ (ಬೇವೂರ), ಸಂಘದ ಆಡಳಿತ ಸಲಹೆಗಾರ್ತಿ ಡಾ.ಮೀನಾ ಚಂದಾವರಕರ, ಆಡಳಿತಾಧಿಕಾರಿಗಳಾದ ವಿ.ಆರ್.ಶಿರೋಳ ಹಾಗೂ ಡಾ. ವಿ.ಎಸ್.ಕಟಗಿಹಳ್ಳಿಮಠ, ಪದನಿಮಿತ್ತ ಕಾರ್ಯದರ್ಶಿ ಡಾ.ಎಸ್.ಎಂ.ಗಾಂವ್ಕರ್, ಪ್ರಾಚಾರ್ಯರಾದ ಎಸ್.ಆರ್.ಮೂಗನೂರಮಠ ಮತ್ತು ಜಗನ್ನಾಥ್ ಚವ್ಹಾನ್, ಸಂಗೀತ ಮತ್ತು ಪ್ರದರ್ಶಕ ಕಲೆಗಳ ಮಹಾವಿದ್ಯಾಲಯದ ನಿರ್ದೇಶಕ ಡಾ.ಆರ್.ಎಂ.ಬೆಣ್ಣೂರ, ಸಂಗೀತ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಮಠ, ವಿಶ್ರಾಂತ ಪ್ರಾಚಾರ್ಯ ಪಂ.ಸಿದ್ದರಾಮಯ್ಯ ಮಠಪತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.ಸಂಗೀತ, ಪ್ರದರ್ಶಕ ಕಲೆಗಳ ಕಾಲೇಜು ಆರಂಭ
ಕನ್ನಡಪ್ರಭ ವಾರ್ತೆ ಬಾಗಲಕೋಟೆ ನೂತನವಾಗಿ ಆರಂಭಗೊಂಡಿರುವ ಬಿವಿವಿ ಸಂಘದ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಮಹಾವಿದ್ಯಾಲಯಕ್ಕೆ ವಿವಿಧ ಕೋರ್ಸ್ಗಳಿಗೆ ಅನುಮೋದನೆ ನೀಡುವ ಉದ್ದೇಶದಿಂದ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಪರಿಶೀಲನಾ ಸಮಿತಿಯು ಮಹಾವಿದ್ಯಾಲಯಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.