ಸಾರಾಂಶ
ಗದಗ ನಗರದ ಜೆ.ಟಿ. ಕಾಲೇಜಿನ ವಿಡಿಯೋ ಕಾನ್ಫರನ್ಸ್ ಹಾಲ್ದಲ್ಲಿ ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲ್ಲಿ ಜರುಗಿದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ವಿಪ ಸದಸ್ಯ ಎಸ್.ವಿ. ಸಂಕನೂರ ಉದ್ಘಾಟಿಸಿದರು.
ಜಿಲ್ಲಾಡಳಿತದಿಂದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮ ಉದ್ಘಾಟನೆಗದಗ: ಏಡ್ಸ್ ತಡೆಗಟ್ಟಲು ಸಮುದಾಯದ ಸಹಭಾಗಿತ್ವ ಅವಶ್ಯಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ತಿಳಿಸಿದರು.
ಅವರು ಶುಕ್ರವಾರ ಗದಗ ನಗರದ ಜೆ.ಟಿ. ಕಾಲೇಜಿನ ವಿಡಿಯೋ ಕಾನ್ಫರನ್ಸ್ ಹಾಲ್ದಲ್ಲಿ ಜಿಲ್ಲಾ ಆಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಹಾಗೂ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಜಿಲ್ಲಾ ವಾರ್ತಾ ಇಲಾಖೆ, ಜಿಮ್ಸ ರಕ್ತ ನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ, ಜಿಮ್ಸ್ ಸರಕಾರಿ ಶುಶ್ರೂಷಾ ಮಹಾವಿದ್ಯಾಲಯ, ಬಸವೇಶ್ವರ ಪ್ಯಾರಾ ಮೆಡಿಕಲ್ ಕಾಲೇಜ್, ಗಾಂಧೀಜಿ ಪ್ಯಾರಾ ಮೆಡಿಕಲ್ ಕಾಲೇಜ್, ಪಾಲನ ಗಾಲಾ ನರ್ಸಿಂಗ್ ಕಾಲೇಜ್, ಜಿಲ್ಲಾ ರೆಡ್ಕ್ರಾಸ್ ಸಂಸ್ಥೆ, ಆಯ್.ಎಂ.ಎ. ರಕ್ತ ಭಂಡಾರ, ಕೆ.ವಿ. ಹಂಚಿನಾಳ ನರ್ಸಿಂಗ್ ಕಾಲೇಜ್, ರಕ್ಷಣೆ ಜಿಲ್ಲಾ ಮಹಿಳಾ ಒಕ್ಕೂಟ, ಸೃಷ್ಟಿ ಸಂಕುಲ ಸಂಸ್ಥೆ, ನವಚೇತನ ಸಂಸ್ಥೆ, ಜಗದ್ಗುರು ತೋಂಟದಾರ್ಯ ಮಹಾವಿದ್ಯಾಲಯ ಹಾಗೂ ರೆಡ್ ರಿಬ್ಬನ್ ಕ್ಲಬ್ ಗದಗ ಇವರುಗಳ ಸಂಯುಕ್ತ ಆಶ್ರಯದಲ್ಲ್ಲಿ ಜರುಗಿದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಈ ವರ್ಷದ ಘೋಷಣೆಯಂತೆ ಸಮುದಾಯಗಳು ಮುನ್ನಡೆಸಲಿ ಎಂಬ ನುಡಿಯಂತೆ ಸಮುದಾಯ ಜಾಗೃತವಾಗಿ ಮುಂದಾಳತ್ವ ವಹಿಸಿ ಜಾಗೃತಿಯನ್ನು ಮೂಡಿಸಿ ಏಡ್ಸ್ ರೋಗ ಹರಡುತ್ತಿರುವ ಪ್ರಮಾಣವನ್ನು ಸೊನ್ನೆಗೆ ತಂದಾಗ ಮಾತ್ರ ಈ ದಿನಾಚರಣೆಯ ಉದ್ದೇಶ ಪೂರ್ಣಗೊಳ್ಳುವುದು ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ. ಗುರುಪ್ರಸಾದ ಮಾತನಾಡಿ, ಹೆಚ್ಐವಿ ಏಡ್ಸ್ ನಿಯಂತ್ರಣದಲ್ಲಿ ಯುವಕರ ಪಾತ್ರ ಮುಖ್ಯವಾಗಿದ್ದು, ಯುವಕರು, ಕಾಲೇಜ್ ವಿದ್ಯಾರ್ಥಿಗಳು, ಗ್ರಾಮೀಣ ಜನತೆಗೆ ತಿಳುವಳಿಕೆ ಮೂಡಿಸಿ, ಎಚ್ಐವಿ ಮುಕ್ತ ಸಮಾಜ ನಿರ್ಮಾಣ ಮಾಡಲು ಕೈ ಜೋಡಿಸಬೇಕು ಎಂದರು. ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಅರುಂಧತಿ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಚ್.ಐ.ವಿ. ಸೋಂಕಿನ ಪ್ರಮಾಣ ಕಳೆದ ಹತ್ತು ವರ್ಷಗಳ ಅಂಕಿ ಅಂಶಗಳನ್ನು ನೋಡಲಾಗಿ ಗಣನೀಯವಾಗಿ ಇಳಿಕೆ ಕಂಡುಬಂದಿದೆ. ಇದು ಇಲಾಖೆಯ ಹಲವಾರು ತಿಳಿವಳಿಕೆ ಕಾರ್ಯಕ್ರಮಗಳು ಹಾಗೂ ಜಾಗೃತಿ ಜಾಥಾಗಳು ಕಾರಣವಾಗಿದೆ. ಏಡ್ಸ್ ಬಹಳಷ್ಟು ಅಂತರವಿದ್ದು, ಎಚ್.ಐ.ಐ.ವಿ ಸೋಂಕಿತರು ಭಯ ಪಡುವಅಗತ್ಯವಿಲ್ಲ. ಆಪ್ತ ಸಮಾಲೋಚಕರಿಂದ ನೈತಿಕ ಬೆಂಬಲ ಮಾನಸಿಕ ಬೆಂಬಲವನ್ನು ಪಡೆದು ಇತರರಂತೆ ಸಾಮಾನ್ಯ ಜೀವನ ನಡೆಸಬಹುದು ಎಂದರು. ಜಿಲ್ಲೆಯ ಎಚ್.ಐ.ವಿ. ನಿಯಂತ್ರಣದಲ್ಲಿ ಉತ್ತಮ ಸೇವೆ ಸಲ್ಲಿಸಿದ ಲಕ್ಷ್ಮೇಶ್ವರ, ನರಗುಂದ, ಮುಂಡರಗಿ ಮತ್ತು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಗದಗ ಐಸಿಟಿಸಿ ಆಪ್ತ ಸಮಾಲೋಚಕ ನೀಲಮ್ಮ ಸುರಪ್ಪಗೌಡರ, ಚನ್ನಮ್ಮ, ಅರವಿಂದ ಕೊಪ್ಪಳ, ಮಂಜುನಾಥ ಅಂಗಡಿ ಹೀಗೆ 5 ಕೇಂದ್ರಗಳ ಸಿಬ್ಬಂದಿಗಳಿಗೆ ಉತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇದರೊಂದಿಗೆ ಉತ್ತಮ ರೆಡ್ರಿಬ್ಬನ್ ಕಾಲೇಜು ಎಂದು ಸಿದ್ದೇಶ್ವರ ಕಾಲೇಜ್ ನರಗುಂದ, ಜೆ.ಟಿ. ಕಾಲೇಜ್ ಗದಗ, ಮತ್ತು ಕೆ.ಎಲ್.ಇ ಕಲಾ ಮತ್ತು ವಾಣಿಜ್ಯಕಾಲೇಜ್ ಗದಗ, ಇಂಡಸ್ಟ್ರೀಯಲ್ ಎಸ್ಟೇಟ್ಗದಗ ಇವರುಗಳಿಗೆ ಪ್ರಮಾಣ ಪತ್ರ ನೀಡಿ ಸನ್ಮಾನಿಸಲಾಯಿತು. ಪ್ರೊ ಕೌಲಗಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿಶ್ವ ಏಡ್ಸ್ ದಿನಾಚರಣೆ ಪ್ರಯುಕ್ತ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಿ.ಸಿ. ಕರಿಗೌಡರ, ಡಿಎಚ್ಓ ಡಾ.ಎಸ್.ಎಸ್. ನೀಲಗುಂದ, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರೀತ ಖೋನಾ, ಡಾ. ಮಹ್ಮದ್ ಅಶ್ರಫ್ ಉಲ್, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಕಾಲೇಜಿನ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪವಿತ್ರಾ ಪಾಟೀಲ ಪ್ರಾರ್ಥಿಸಿದರು, ಬಸವರಾಜ ಲಾಳಗಟ್ಟಿ ಸ್ವಾಗತಿಸಿದರು.