ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದರು ಜಿಲ್ಲಾ ಪಂಚಾಯ್ತಿ ಸಿಇಒ ಗಿತ್ತೆ ಮಾಧವ ವಿಠಲರಾವ್ ಸೂಚಿಸಿದರು.
ಹರಿಹರ: ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ, ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕೆಂದರು ಜಿಲ್ಲಾ ಪಂಚಾಯ್ತಿ ಸಿಇಒ ಗಿತ್ತೆ ಮಾಧವ ವಿಠಲರಾವ್ ಸೂಚಿಸಿದರು.
ತಾಲೂಕಿನ ಕೊಂಡಜ್ಜಿ ಗ್ರಾಮಕ್ಕೆ ಸೋಮವಾರ ಭೇಟಿ ನೀಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ರಸ್ತೆ, ಚರಂಡಿ, ಕಿರು ನೀರು ಸರಬರಾಜು ಕೇಂದ್ರ ಸೇರಿ ಯಾವುದೇ ಕಾಮಗಾರಿಗಳಿದ್ದರೂ ಅರ್ಧಕ್ಕೆ ನಿಲ್ಲಿಸುವುದು, ನಿಧಾನಗತಿ ಮಾಡುವುದನ್ನು ಸಹಿಸಲಾಗುವುದಿಲ್ಲ ಎಂದರು.
ನಂತರ ಗ್ರಾಮದ ಗ್ರಾಮ ಪಂಚಾಯ್ತಿ, ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಪೊಲೀಸ್ ಪಬ್ಲಿಕ್ ಶಾಲೆ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ತರಬೇತಿ ಶಿಬಿರ, ಆಂಜನೇಯ ಸಮುದಾಯ ಭವನ, ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗ್ರಾಮ ಪಂಚಾಯಿತಿ ಸದಸ್ಯರಾದ ಶಿವಕುಮಾರ್, ನಾರಪ್ಪ, ತಾಲೂಕು ಪಂಚಾಯ್ತಿಯ ಪ್ರಭಾರಿ ಸಹಾಯಕ ನಿರ್ದೇಶಕ ಸುನೀಲ್ ಕುಮಾರ್, ಪಿಡಿಒ ರುಬಿಯಾ ನಾಜ್ ಎಚ್.ಆರ್., ನರೇಗಾ ಇಂಜಿನಿಯರ್ ರಂಗನಾಥ್, ಶ್ರೀನಿವಾಸ್ ಬಾಬು, ಗ್ರಾಮದ ಮುಖಂಡರಾದ ಗೌಡರ ಪ್ರಸನ್ನ, ದೇವರಾಜ್ ತೋಟಿಗರ, ಮುದೇಗೌಡ್ರ ಪರಮೇಶ್ವರಪ್ಪ ಇದ್ದರು.