ಸಾರಾಂಶ
ತರೀಕೆರೆ: ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಕೆಲಸಗಳನ್ನು ಅನಗತ್ಯ ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸ ಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ಜೆ.ಜಿ.ತಿರುಮಲೇಶ್ ಸೂಚಿಸಿದ್ದಾರೆ.ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ಚಿಕ್ಕಮಗಳೂರು ಜಿಲ್ಲೆಯಿಂದ ಏರ್ಪಡಿಸಿದ್ದ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಿ ಮಾತನಾಡುತ್ತಿದ್ದರು. ಆಡಳಿತ ಯಂತ್ರ ಸುಧಾರಣೆ ಮತ್ತು ಬಲಪಡಿಸುವ ಉದ್ದೇಶಕ್ಕಾಗಿ ಲೋಕಾಯುಕ್ತ ಸಂಸ್ಥೆ ಮತ್ತು ಕಾಯಿದೆ ಇದೆ. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಗುತ್ತಿಗೆ ಆಧಾರಿತ ನೌಕರರು ಕೆಲಸ ಮಾಡಿಕೊಡಲು ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಟ್ಟರೆ, ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಮಾಡಿದರೆ ಪ್ರಕರಣ ದಾಖಲಿಸಿಕೊಳ್ಳಬಹುದಾಗಿದೆ. ಕಾನೂನು ಮೀರಿ ಮಾಡಿದ ಕೆಲಸಗಳಿಗೆ ಯಾರಿಂದಲೂ ರಕ್ಷಣೆ ಸಿಗುವುದಿಲ್ಲ ಎಂದು ಎಚ್ಚರಿಸಿದರು.ಮೂಲ ಸರ್ವೆ ಸ್ಕೆಚ್ ವ್ಯತ್ಯಾಸವಾಗಿದ್ದು ಸರಿಪಡಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ಬೆಟ್ಟದಹಳ್ಳಿ ಗ್ರಾಮದ ಜಯಪ್ಪ ದೂರು ನೀಡಿದರು. ಪುರಸಭೆನಿಯಮಗಳನ್ನು ಗಾಳಿಗೆ ತೂರಿ, ಷರತ್ತುಗಳನ್ನು ಉಲ್ಲಂಘಿಸಿ ಪಟ್ಟಣದ ಬೇಗೂರಯ್ಯನ ಬೀದಿಯಲ್ಲಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಪಟ್ಟಣದ ಟಿ.ಆರ್.ಸೋಮಶೇಖರಯ್ಯ ದೂರು ನೀಡಿದರು.
12ಕೆಟಿಆರ್.ಕೆ.8ಃತರೀಕೆರೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಡಿ.ವೈ.ಎಸ್.ಪಿ.ಜೆ.ಜೆ.ತಿರುಮಲೇಶ್ ಸಾರ್ವಜನಿಕರಿಂದ ದೂರು ಸ್ವೀಕರಿಸಿದರು.