ರೈಲು ಮಾರ್ಗ ಪರಿಶೀಲನೆ ಶೀಘ್ರ ಪೂರ್ಣಗೊಳಿಸಿ: ಶೆಟ್ಟರ್‌

| Published : Jan 05 2025, 01:33 AM IST

ಸಾರಾಂಶ

ಕಿತ್ತೂರು-ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ, ಜಾಢಶಹಾಪುರ-ಹೊನಗಾ ಮತ್ತು ಹಲಗಾ-ಮಚ್ಛೆ ನಡುವೆ ರಿಂಗ್ (ಬಾಯ್ ಪಾಸ್) ರಸ್ತೆ ನಿರ್ಮಾಣ ಹಾಗೂ ಬೆಳಗಾವಿ (ಶಗಣಮಟ್ಟಿ)-ಹುನಗುಂದ-ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಅವರು ಆಯಾ ಇಲಾಖೆಯ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿ, ಮಾಹಿತಿ ಪಡೆದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕಿತ್ತೂರು-ಧಾರವಾಡ ನೂತನ ರೈಲು ಮಾರ್ಗ ನಿರ್ಮಾಣ, ಜಾಢಶಹಾಪುರ-ಹೊನಗಾ ಮತ್ತು ಹಲಗಾ-ಮಚ್ಛೆ ನಡುವೆ ರಿಂಗ್ (ಬಾಯ್ ಪಾಸ್) ರಸ್ತೆ ನಿರ್ಮಾಣ ಹಾಗೂ ಬೆಳಗಾವಿ (ಶಗಣಮಟ್ಟಿ)-ಹುನಗುಂದ-ರಾಯಚೂರು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್ ಅವರು ಆಯಾ ಇಲಾಖೆಯ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಿ, ಮಾಹಿತಿ ಪಡೆದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಧಾರವಾಡ ಹಾಗೂ ಬಾಗಲಕೋಟೆ ಮೇಲೆ ಪ್ರಸ್ತಾಪಿತ ರಸ್ತೆಯ ನಿರ್ಮಾಣಕ್ಕೆ ಅವಶ್ಯವೆನಿಸಿರುವ ಭೂಸ್ವಾಧೀನ ಪ್ರಗತಿ ವರದಿಯನ್ನು ಆಯಾ ಭೂಸ್ವಾಧೀನ ಅಧಿಕಾರಿಗಳಿಂದ ಪಡೆದುಕೊಂಡರು. ಸಾಕಷ್ಟು ಪ್ರಗತಿ ಕಂಡು ಬಂದಿದ್ದು, ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರ ಪ್ರಾರಂಭಿಸುವಂತೆ ಸೂಚಿಸಿದರು.

ಚೋರ್ಲಾ ಮಾರ್ಗವಾಗಿ ಗೋವಾಕ್ಕೆ ತಲುಪುವ ರಸ್ತೆ ಕಾಮಗಾರಿ ಸ್ಥಿತಿಗತಿ ಬಗ್ಗೆ ತಿಳಿದುಕೊಂಡು ಕಾಮಗಾರಿ ಬೇಗನೆ ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.

ಬೆಳಗಾವಿ-ಕಿತ್ತೂರು-ಧಾರವಾಡ ನೂತನ ರೈಲು ಮಾರ್ಗದ ಬಗ್ಗೆ ನಡೆಯುತ್ತಿರುವ ಭೂಸ್ವಾಧೀನಕ್ಕೆ ಅನುಕೂಲವಾಗುವ Demarcation ಬಗ್ಗೆ ಮಾಹಿತಿಯನ್ನು ಕೆಎಐಡಿಬಿ ಧಾರವಾಡ ಅಧಿಕಾರಿಗಳಿಂದ ಪಡೆದುಕೊಂಡು ಈ ಕುರಿತು ಸಾಕಷ್ಟು ಪ್ರಗತಿ ಸಾಧಿಸಿದ್ದು, ಶೀಘ್ರ ಪೂರ್ಣಗೊಳಿಸಲು ಸಂಸದರು ಆದೇಶಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್ರಾ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಧಾರವಾಡದ ಭುವನೇಶಕುಮಾರ, ಬಾಗಲಕೋಟೆಯ ಸೈಯದ್ ಅಮನ್, ವಿಶೇಷ ಭೂ ಸ್ವಾಧೀನ ಅಧಿಕಾರಿಗಳಾದ ಜೈನಾಪೂರ, ಚೌವ್ಹಾಣ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.