ಗ್ರಾಮ ಪಂಚಾಯಿತಿ ಅವ್ಯವಹಾರ ಖಂಡನೆ, ತನಿಖೆಗೆ ಆಗ್ರಹ

| Published : Aug 25 2024, 02:03 AM IST

ಗ್ರಾಮ ಪಂಚಾಯಿತಿ ಅವ್ಯವಹಾರ ಖಂಡನೆ, ತನಿಖೆಗೆ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

Condemnation of Gram Panchayat malpractice, demand for investigation

-ಬೀರನೂರ ಗ್ರಾಮ ಪಂಚಾಯಿತಿ ಸದಸ್ಯರಿಂದ ಪ್ರತಿಭಟನೆ: ಮನವಿ ಪತ್ರ ಸಲ್ಲಿಕೆ

-------

ಕನ್ನಡಪ್ರಭ ವಾರ್ತೆ ಶಹಾಪುರ

ಬೀರನೂರ ಗ್ರಾಮ ಪಂಚಾಯಿತಿಯಲ್ಲಿ 15ನೇ ಹಣಕಾಸು ಯೋಜನೆ ಮತ್ತು ಜಲ್‌ ಜೀವನ್‌ ಮಿಷನ್‌ ಅವ್ಯವಹಾರ ನಡೆದಿದ್ದು, ಕೂಡಲೇ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯರು ನಗರದ ತಾಲೂಕು ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿ ಕಚೇರಿಯ ವ್ಯವಸ್ಥಾಪಕ ರಾಯಪ್ಪಗೌಡ ಹುಡೇದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಯ್ಯ ದೊಡ್ಮನಿ ಅವರು, ಗ್ರಾಮಗಳಲ್ಲಿ ಹಲವಾರು ಸಮಸ್ಯೆಗಳಿದ್ದು, ಬೀದಿದೀಪವಾಗಲಿ, ಕುಡಿ ವ ನೀರಾಗಲಿ ಯಾವುದೇ ಕೆಲಸ ಮಾಡದೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮನಸ್ಸಿಗೆ ಬಂದಂತೆ ಬಿಲ್ ನೀಡಿದ್ದಾರೆ. ಗ್ರಾಮ ಪಂಚಾಯಿತಿಯಲ್ಲಿ ನಡೆದಿರುವ ಅವ್ಯವಹಾರಗಳ ಬಗ್ಗೆ ಸೂಕ್ತ ತನಿಖೆ ಆಗಬೇಕು ಎಂದು ತಿಳಿಸಿದರೂ ಈವರೆಗೂ ಯಾವುದೇ ತನಿಖೆಯಾಗಿಲ್ಲ. ತಾಲೂಕು ಪಂಚಾಯಿತಿ ಅಧಿಕಾರಿಗಳು ಈ ಸಮಸ್ಯೆಗಳ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

15ನೇ ಹಣಕಾಸಿನ ಅನುದಾನದ ಬಗ್ಗೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡಿಲ್ಲ. ಹಿಂದಿನ ವರ್ಷದ ವಾರ್ಷಿಕ ಜಮಾಬಂದಿ ನಡೆಸದೆ ಮುಂದಿನ ವರ್ಷದ ಅನುದಾನವನ್ನು ಖರ್ಚು ಮಾಡುವಂತಿಲ್ಲ. ಅದು ಪಾಲನೆಯಾಗುತ್ತಿಲ್ಲ. 2023–24ನೇ ಸಾಲಿನ ಜೆಜೆಎಂ ರೀಫಂಡ್ ಅನುದಾನ 8,16,221 ರು.ಗಳು ಇದ್ದು, ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಸರ್ವ ಸದಸ್ಯರ ಒಪ್ಪಿಗೆ ಪಡೆದು ನಡವಳಿ ಪುಸ್ತಕದಲ್ಲಿ ನಮೂದಿಸಿ ಅಂಗೀಕರಿಸಿ, ಅದರ ನಿರ್ಣಯದಂತೆ ಖರ್ಚು ವೆಚ್ಚ ಮಾಡುವ ನಿಯಮವಿರುತ್ತದೆ. ಆದರೆ, ಏಕಪಕ್ಷಿಯವಾಗಿ ಅದನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಬಡವರ ಕಲ್ಯಾಣ ಹಾಗೂ ಗ್ರಾಮಗಳ ಅಭಿವೃದ್ಧಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿ ಮಾಡಿದೆ. ಆದರೆ, ಅನುಷ್ಠಾನಗೊಳಿಸುವಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅವರು ವಿಫಲವಾಗಿದ್ದು, ಸಂವಿಧಾನ ಆಶಯಗಳನ್ನು ಗಾಳಿಗೆ ತೂರಿ ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಪಿಡಿಓ ಶಾರದಾ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮೌನೇಶ್ ಬೀರನೂರ, ಪ್ರದೀಪ್ ಅಣಬಿ, ಧರ್ಮರಾಜ್ ಹೋತಪೇಟ್, ನಾಗರಾಜ್ ಬೀರನೂರ, ಅಶೋಕ ಹತ್ತಿಗೂಡುರ, ಮರೆಪ್ಪ ಗುಡಿಸಲು ಇದ್ದರು.

-----

24ವೈಡಿಆರ್1: ಬೀರನೂರ ಗ್ರಾಮ ಪಂಚಾಯಿತಿಯಲ್ಲಿ ಪಿಡಿಓ ಅವ್ಯವಹಾರ ನಡೆಸಿದವರ ವಿರುದ್ಧ ಕ್ರಮ ವಹಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಸದಸ್ಯರು ನಗರದ ತಾಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.