ಸಾರಾಂಶ
ಸುಮಾರು ಮೂರು ತಾಸು ವಿಚಾರಣೆ ಎದರಿಸಿದರು
ಮೈಸೂರುರಾಯಚೂರು ಕ್ಷೇತ್ರದ ಕಾಂಗ್ರೆಸ್ ಸಂಸದ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಜಿ. ಕುಮಾರ್ ನಾಯ್ಕ್ ಅವರು ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಗೆ ಶನಿವಾರ ಹಾಜರಾಗಿ, ಮುಡಾ ನಿವೇಶನ ಹಂಚಿಕೆ ಸಂಬಂಧ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.ಮುಡಾ ನಿವೇಶನ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವ ಲೋಕಾಯುಕ್ತ ಪೊಲೀಸರು, ಮೈಸೂರಿನ ಆಗಿನ ಜಿಲ್ಲಾಧಿಕಾರಿ ಜಿ. ಕುಮಾರ್ ನಾಯ್ಕ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿತ್ತು. ಲೋಕಾಯುಕ್ತ ಪೊಲೀಸರ ನೋಟಿಸ್ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾದ ಜಿ. ಕುಮಾರ್ ನಾಯ್ಕ್ ಅವರು, ಸುಮಾರು ಮೂರು ತಾಸು ವಿಚಾರಣೆ ಎದರಿಸಿದರು. ಕೆಸರೆಯ ವಿವಾದಿತ ಜಮೀನು ಭೂ ಪರಿವರ್ತನೆ ಮಾಡಿದ ಸಂಬಂಧ ಲೋಕಾಯುಕ್ತ ಎಸ್ಪಿ ಟಿ.ಜೆ. ಉದೇಶ ನೇತೃತ್ವದ ತಂಡವು ಕೇಳಿದ ಪ್ರಶ್ನೆಗಳಿಗೆ ಜಿ. ಕುಮಾರ್ ನಾಯ್ಕ್ ಉತ್ತರಿಸಿದ್ದಾರೆ.