ಸಾರಾಂಶ
ದೇಶದ 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಮಾತನಾಡಿ, ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ದೇಶದಲ್ಲಿ ಬ್ರಿಟಿಷರ ಆಳ್ವಿಕೆಗಿಂತಲೂ ಬಿಜೆಪಿ ಕೆಟ್ಟ ಆಡಳಿತ ನಡೆಸುತ್ತಿದೆ ಎಂದರು.
ಕನ್ನಡಪ್ರಭ ವಾರ್ತೆ ಮಂಗಳೂರು
ಬಿಜೆಪಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ದೇಶದಲ್ಲಿ ಬ್ರಿಟಿಷರ ಆಳ್ವಿಕೆಗಿಂತಲೂ ಬಿಜೆಪಿ ಕೆಟ್ಟ ಆಡಳಿತ ನಡೆಸುತ್ತಿದೆ. ಇಡಿ, ಸಿಬಿಐ, ಐಟಿ ಮುಂತಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಲಕೆ ಮಾಡಿಕೊಂಡು ವಿರೋಧ ಪಕ್ಷದ ನಾಯಕರನ್ನು ಹೆದರಿಸುತ್ತಿದೆ. ಇದರ ವಿರುದ್ಧ ಕಾಂಗ್ರೆಸಿಗರು ಹೋರಾಡಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಕರೆ ನೀಡಿದ್ದಾರೆ.ದೇಶದ 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಈ ಸಂದರ್ಭ ರಾಜ್ಯಸಭಾ ಮಾಜಿ ಸದಸ್ಯ ಬಿ.ಇಬ್ರಾಹಿಂ, ಮಾಜಿ ಶಾಸಕ ಜೆ.ಆರ್.ಲೋಬೊ, ಲೋಕಸಭಾಅಭ್ಯರ್ಥಿ ಪದ್ಮರಾಜ್, ಮುಖಂಡರಾದ ಸುರೇಶ್ ಬಳ್ಳಾಲ್, ಸುರೇಂದ್ರ ಕಂಬಳಿ, ಜೆ.ಅಬ್ದುಲ್ ಸಲೀಂ, ಅಬ್ದುಲ್ರವೂಫ್, ಶಾಹುಲ್ ಹಮೀದ್, ಕೆ.ಪಿ.ಥೋಮಸ್, ನವೀನ್ ಡಿ’ಸೋಜಾ, ವಿಶ್ವಾಸ್ ಕುಮಾರ್ ದಾಸ್, ಶಾಲೆಟ್ಪಿಂಟೊ, ಸಮೀರ್ ಪಜೀರ್, ಎಸ್.ಅಪ್ಪಿ, ಟಿ.ಹೊನ್ನಯ್ಯ, ಹಯಾತುಲ್ ಖಾಮಿಲ್, ವಿಶ್ವನಾಥ ಬಜಾಲ್,ಶುಭೋದಯ ಆಳ್ವ, ನೀರಜ್ ಚಂದ್ರಪಾಲ್, ಟಿ.ಕೆ.ಸುಧೀರ್, ವಿಕಾಸ್ ಶೆಟ್ಟಿ, ನಝೀರ್ ಬಜಾಲ್, ಭರತೇಶ್ಅಮೀನ್, ಶಬೀರ್.ಎಸ್, ಸಬಿತಾ ಮಿಸ್ಕಿತ್, ಗೀತಾ ಅತ್ತಾವರ, ಚಂದ್ರಕಲಾ ಜೋಗಿ, ಶಾರಿಕ ಪೂಜಾರಿ,ಮಂಜುಳಾ ನಾಯಕ್, ಚಂದ್ರಕಲಾ ಡಿ.ರಾವ್, ಆಲ್ವಿನ್ ಪ್ರಕಾಶ್, ಎ.ಸಿ.ಜಯರಾಜ್, ಮೋಹನ್ ದಾಸ್ ಕೊಟ್ಟಾರಿ,ಸುಹಾನ್ ಆಳ್ವ, ಝುಬೈರ್ ತಲೆಮೊಗರು, ರಮಾನಂದ ಪೂಜಾರಿ, ರೋಬಿನ್, ಲಕ್ಷ್ಮಣ್ ಶೆಟ್ಟಿ, ಜಿ.ಎ.ಜಲೀಲ್,ಫಯಾಝ್ ಅಮ್ಮೆಮ್ಮಾರ್, ಸೌಹನ್ ಎಸ್.ಕೆ ಇದ್ದರು.ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಜೋಕಿಂ ಡಿ’ಸೋಜಾ ಧ್ವಜ ಪ್ರಭಾರಿಯಾಗಿ ನಿರ್ವಹಿಸಿದರು.